Advertisement

ಬೆಳ್ತಂಗಡಿ: ಅಲ್ಯುಮಿನಿಯಂ ದೋಟಿ ವಿದ್ಯುತ್‌ ತಂತಿಗೆ ಸ್ಪರ್ಶ: ಮೂವರು ಮಕ್ಕಳಿಗೆ ಗಾಯ

12:14 AM Apr 23, 2023 | Team Udayavani |

ಬೆಳ್ತಂಗಡಿ: ಅಲ್ಯುಮಿನಿಯಂ ದೋಟಿ ಕೊಂಡೊಯ್ಯು ತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಲೈನ್‌ಗೆ ಸಂಪರ್ಕಿಸಿ ಮೂವರು ಮಕ್ಕಳು ಗಾಯಗೊಂಡ ಘಟನೆ ಶನಿವಾರ ಚಾರ್ಮಾಡಿಯಲ್ಲಿ ಸಂಭವಿಸಿದೆ.

Advertisement

ಇಮ್ತಿಯಾಜ್ ಅವರ ಮಕ್ಕಳಾದ ಮಹಮ್ಮದ್‌ ಆಲಿ (16), ಮಹಮ್ಮದ್‌ ಇನಾಜ್‌ (8) ಹಾಗೂ ಹನೀಫ್‌ ಅವರ ಪುತ್ರ ಅಯ್ನಾನ್‌ (6) ವಿದ್ಯುತ್‌ ಆಘಾತಕ್ಕೊಳಗಾದವರು.

ಸ್ಥಳೀಯರು ಕೂಡಲೇ ಅವರನ್ನು ಕಕ್ಕಿಂಜೆ ಹಾಗೂ ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ಒದಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆೆ. ಮಕ್ಕಳು ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next