Advertisement

ಬೆಳ್ತಂಗಡಿ: ಬಂಗಾರ ಬಳಿಗೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವು

05:22 PM Dec 07, 2022 | Team Udayavani |

ಬೆಳ್ತಂಗಡಿ: ಮಲವಂತಿಗೆ ಗ್ರಾ.ಪಂ. ವ್ಯಾಪ್ತಿಯ ದುರ್ಗಮ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗೆಂದು ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಅಶೋಕ್ ಎಂದು ತಿಳಿದುಬಂದಿದೆ.

ಅತ್ಯಂತ ಕಡಿದಾದ ದುರ್ಗಮ ಹಾದಿ ಇದಾಗಿದ್ದು ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮತ್ತು ಮರ್ತೋರ್ವ ಬದುಕೊಳಿದಿದ್ದು. ಹಿಂಬದಿ ಕುಳಿತಿದ್ದ ಕಾರ್ಮಿಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸವ ವೇಳೆ ಮೃತಪಟ್ಟಿದ್ದಾರೆ.

ಕಾಡಿನಂಚಿನಲ್ಲಿರುವ ಎಳನೀರು ಭಾಗದಲ್ಲಿ ಪ್ರಸಕ್ತ ಅಭಿವೃದ್ಧಿ ಕಾಣುತ್ತಿದ್ದು. ಬೆಳ್ತಂಗಡಿ ತಾಲೂಕಿನ ಕಟ್ಟಕಡೆಯ ಈ ಗ್ರಾಮಕ್ಕೆ ಕಳೆದ ಫೆಬ್ರವರಿಯಲ್ಲಿ 5 ಕೋ.ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನಡೆಸಲಾಗಿತ್ತು. ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ವಿಶ್ವದ ಅತಿದೊಡ್ಡ, ಅತ್ಯಂತ ನಕಾರಾತ್ಮಕ ಪಕ್ಷವನ್ನು ಸೋಲಿಸಲಾಗಿದೆ ಎಂದ ಆಪ್

Advertisement

Advertisement

Udayavani is now on Telegram. Click here to join our channel and stay updated with the latest news.

Next