Advertisement

ಬೆಳ್ತಂಗಡಿ ತಂದೆಯಿಂದಲೇ ಮಗನ ಬರ್ಬರ ಹತ್ಯೆ

09:20 AM Feb 12, 2018 | Team Udayavani |

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕಾಗಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಮಟ್ಲ ಎಂಬಲ್ಲಿ ಸಂಭವಿಸಿದೆ. 

Advertisement

ಮೃತ ವ್ಯಕ್ತಿ ನವೀನ್(28)  ತಂದೆ ಮಂಜುನಾಥ ಹಾಗೂ ಸಹೋದರ ರಾಘವೇಂದ್ರ ಸೇರಿಕೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಮಂಜುನಾಥ ಹಾಗೂ ರಾಘವೇಂದ್ರ ಬೆಳ್ತಂಗಡಿಯಲ್ಲಿ ಜ್ಯೋತಿಷ್ಯ ವೃತ್ತಿ ಮಾಡಿಕೊಂಡಿದ್ದು ನವೀನ ಮನೆಯಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದರು.

ನವೀನನಿಗೆ ಮದುವೆ ಆಗಿದ್ದು ಪತ್ನಿ‌ ಹಾಗೂ ಇಬ್ಬರು ಮಕ್ಕಳಿದ್ದು ಮೂಲತಃ ಹಾಸನ ಮೂಲದವರಾಗಿದ್ದು ಸುಡುಗಾಡು ಸಿದ್ದ ಜನಾಂಗಕ್ಕೆ ಸೇರಿದವರಾಗಿರುತ್ತಾರೆ.

ಕೊಲೆ ಹಿನ್ನೆಲೆ: ಕಳೆದ ಡಿಸೆಂಬರ್ 31 ರಂದು ಮನೆಯಲ್ಲಿ ಹೊಸ ವರ್ಷ ಆಚರಣೆ ಮಾಡುವ ಸಂದರ್ಭದಲ್ಲಿ ಮೃತ ನವೀನನಿಗೆ ಹಾಗೂ ತಂದೆ ಮಂಜುನಾಥ ಅವರಿಗೆ ಯಾವುದೋ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ನವೀನನು ತಂದೆ ಮಂಜುನಾಥರಿಗೆ ಹೊಡೆದಿದ್ದನು. ಅದೇ ದ್ವೇಷದಿಂದ ಕಳೆದ ರಾತ್ರಿ ಸುಮಾರು 9 ಗಂಟೆ ಸಮಯಕ್ಕೆ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಮಂಜುನಾಥ ಹಾಗೂ ರಾಘವೇಂದ್ರ ಎಂಬವರು ಸೇರಿಕೊಂಡು ನವೀನನ ಹೊಟ್ಟೆಯ ಭಾಗಕ್ಕೆ ಹಾಗೂ ತೊಡೆಗೆ ಚೂರಿಯಿಂದ ತಿವಿದಿದ್ದಾರೆ ತೀವ್ರ ರಕ್ತಸ್ರಾವದಿಂದ ನವೀನ್ ಮೃತಪಟ್ಟಿದ್ದಾನೆ. 

ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next