Advertisement

ಬೆಳ್ತಂಗಡಿ: ಹೃದಯಾಘಾತದಿಂದ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ್ ಸಾವು

05:33 PM Aug 24, 2022 | Team Udayavani |

ಬೆಳ್ತಂಗಡಿ: ಕಣಿಯೂರು ಗ್ರಾಮದ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರೇಂದ್ರ ಪಾಟೀಲ (52) ಅವರು ಆ. 23ರಂದು ಹೃದಯಾಘಾತದಿಂದ ಪುಂಜಾಲಕಟ್ಟೆಯ ತಮ್ಮ ಬಾಡಿಗೆ ಮನೆಯಲ್ಲಿ ಸಾವನ್ನಪ್ಪಿದರು.

Advertisement

ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗಾದ ಗುತ್ತಿಕಟ್ಟಿ ಲಂಬಾಣಿ ಹಟ್ಟಿಯವರಾದ ಅವರು ಪುಂಜಾಲಕಟ್ಟೆಯ ಪಿಲಾತಬೆಟ್ಟು ಬೆರ್ಕಳ ರಸ್ತೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಶನಿವಾರ ಪತ್ನಿ ಹಾಗೂ ಮಕ್ಕಳು ರಜೆಯ ನಿಮಿತ್ತ ಊರಿಗೆ ತೆರಳಿದ್ದರು. ಮಂಗಳವಾರ ಹಿಂದಿರುಗಿ ಬಂದಾಗ ಘಟನೆ ತಿಳಿದುಬಂದಿದೆ. ತತ್‌ಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತಪಟ್ಟಿರುವುದು ಖಚಿತವಾಗಿದೆ.

ಮೃತ ವೀರೇಂದ್ರ ಪಾಟೀಲ ಅವರು ಈ ಹಿಂದೆ ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ನೆರಿಯ ಶಾಲೆಯಲ್ಲಿ ಕರ್ತವ್ಯದಲ್ಲಿದ್ದು ಕಳೆದ ಮೂರು ತಿಂಗಳ ಹಿಂದೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಪಿಲಿಗೂಡು ಹಿ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ವಿರೂಪಾಕ್ಷಪ್ಪ, ಶಾಸಕ ಹರೀಶ್‌ ಪೂಂಜ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಣ ಇಲಾಖೆ ಸಂತಾಪ ಸೂಚಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next