Advertisement

Belthangady ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್‌ ವಶಕ್ಕೆ

12:14 AM Aug 28, 2024 | Team Udayavani |

ಬೆಳ್ತಂಗಡಿ: ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್‌ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆ. 31ರ ವರೆಗೆ ಪೊಲೀಸ್‌ ವಶಕ್ಕೆ ಒಪ್ಪಿಸಿದೆ.

Advertisement

ಬೆಳಾಲು ನಿವಾಸಿ ಬಾಲಕೃಷ್ಣ ಭಟ್‌ ಅವರನ್ನು ಆ. 20ರಂದು ಅವರ ಮನೆಯಲ್ಲಿ ಕೊಲೆ ಮಾಡಿರುವ ಆರೋಪದಲ್ಲಿ ಆ. 24ರಂದು ಧರ್ಮಸ್ಥಳ ಠಾಣಾ ಪೊಲೀಸರು ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54) ಮತ್ತು ಆತನ ಪುತ್ರ ಮುರಳಿಕೃಷ್ಣ(21) ಅವರನ್ನು ಆ. 27ರಂದು ಬಂಧಿಸಿದ್ದರು.

ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಮಂಗಳವಾರ ನ್ಯಾ. ಬಂಧನದ ಅವಧಿ ಮುಗಿದಿದ್ದು, ಆರೋಪಿಗಳನ್ನು ಇನ್‌ಸ್ಪೆಕ್ಟರ್‌ ನಾಗೇಶ್‌ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next