Advertisement

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

08:36 PM Oct 17, 2024 | Team Udayavani |

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎನ್ನುವಲ್ಲಿ ಚರಂಡಿಗೆ ಬಿದ್ದ ಘಟನೆ ಅ. 16 ರಂದು ಸಂಭವಿಸಿದೆ.

Advertisement

ಉಡುಪಿಯಿಂದ ಮೂವರು ಯುವಕರು ಆರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಬೆಳಗ್ಗೆ ಸುಮಾರು 4:45ರ ವೇಳೆಗೆ ಈ ಘಟನೆ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮೂವರೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳದಲ್ಲಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ಕ್ರೇನ್‌ ಬಳಸಿ ಕಾರನ್ನು ಮೇಲಕ್ಕೆತ್ತಲಾಯಿತು. ಈ ಹಿಂದೆ ರಸ್ತೆ ಬದಿಯ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದ ವೇಳೆ ಕಬ್ಬಿಣದ ಸರಳುಗಳು ಅಪಾಯವನ್ನು ತಂದೊಡ್ಡುವಂತಿತ್ತು. ಕೆಲವೆಡೆ ಇನ್ನೂ ಕೂಡ ಅಪಾಯಕಾರಿಯಾಗಿದ್ದು, ಆಯ ತಪ್ಪಿದರೆ ಸವಾರರ ಜೀವಕ್ಕೆ ಕುತ್ತು ಎನ್ನುವಂತಿದೆ.

Advertisement

Udayavani is now on Telegram. Click here to join our channel and stay updated with the latest news.

Next