Advertisement

Belthangady: ಕಾರು ಪಲ್ಟಿಯಾಗಿ ಮೂವರಿಗೆ ಗಾಯ

11:33 AM Mar 03, 2024 | Team Udayavani |

ಬೆಳ್ತಂಗಡಿ: ಇಲ್ಲಿನ ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಬಳಿ ಭಾನುವಾರ ಬೆಳಗ್ಗೆ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡಿದ್ದಾರೆ.

Advertisement

ಚಿಕ್ಕಮಗಳೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಲ್ಲಿ ಮೂವರಿಗೆ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್ ಇತರ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next