Advertisement

Belthangady ಚಾರ್ಮಾಡಿಯ ಮೂವರು ಗಡೀಪಾರು

12:01 AM Apr 11, 2024 | Team Udayavani |

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಗಡೀಪಾರು ಮಾಡಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ಮಹಮ್ಮದ್‌ ಮಹರೂಫ್‌(22), ಮಹಮ್ಮದ್‌ ಶಬೀಬ್‌(22), ಮೊಹಮ್ಮದ್‌ ಮುಬಶೀರ್‌(22) ನನ್ನು ದ.ಕ. ಜಿಲ್ಲೆಯಿಂದ ಬೆಂಗಳೂರಿನ ಬೆಳಂದೂರು ಪೊಲೀಸ್‌ ಠಾಣಾ ವ್ಯಾಪ್ತಿಗೆ ಚುನಾವಣೆ ಮುಗಿಯುವವರೆಗೆ ಗಡೀಪಾರು ಮಾಡಲಾಗಿದೆ.

2023ರ ಜೂನ್‌ 17ರಂದು ಚಾರ್ಮಾಡಿ ಚೆಕ್‌ಪೋಸ್ಟ್‌ ಬಳಿ ಕೆಎಸ್ಸಾರ್ಟಿಸಿ ಬಸ್‌ ಅಡ್ಡಗಟ್ಟಿ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಜತೆ ಜಗಳ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ವಿಚಾರದಲ್ಲಿ ಗಡೀಪಾರು ನಿರ್ಧಾರ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next