Advertisement

Belthangady: ಕಾಡಾನೆಗಳು ಅಟ್ಟುವ ಕಾರ್ಯಾಚರಣೆ

01:04 AM Sep 14, 2023 | Team Udayavani |

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಕಂಡು ಬಂದಿದ್ದು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಅವುಗಳನ್ನು ಕಾಡಿಗೆ ಮರಳಿ ಅಟ್ಟುವ ಕಾರ್ಯಾಚರಣೆ ನಡೆಸಿ ಹಾನಿ ಉಂಟಾಗುವುದನ್ನು ತಪ್ಪಿಸಿದರು.

Advertisement

ಸ್ಥಳೀಯವಾಗಿ ರಾತ್ರಿ 11ರ ಸುಮಾರಿಗೆ ಕಾಡಾನೆಗಳು ತೋಟಕ್ಕೆ ನುಗ್ಗಿಸುವುದು ಗಮನಕ್ಕೆ ಬಂದಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು ಡಿಆರ್‌ಎಫ್‌ಒ ಹರಿಪ್ರಸಾದ್‌, ರಾಜೇಶ್‌ ಗಸ್ತು ಅರಣ್ಯ ಪಾಲಕರಾದ ಸಂತೋಷ, ಸದಾನಂದ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ಆನೆಗಳನ್ನು ಕಾಡಿಗೆ ಅಟ್ಟಿದರು.

ಆನೆ ಗುಂಪಿನಲ್ಲಿ ಮರಿಯು ಇರುವ ಶಂಕೆ ವ್ಯಕ್ತವಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next