Advertisement

Belthangady: ಬಾಲಕಿಗೆ ಕಾರು ಢಿಕ್ಕಿ: ಗಂಭೀರ ಗಾಯ

10:31 PM Apr 09, 2023 | Team Udayavani |

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಯಮೇಗಲದೊಡ್ಡಿ ಗ್ರಾಮದಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಕುಟುಂಬದ ಬಾಲಕಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದು ಗುದ್ದಿದ್ದು ಬಾಲಕಿ ಗಂಭೀರ ಗಾಯಗೊಂಡಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಯಮೇಗಲದೊಡ್ಡಿ ಗ್ರಾಮದ ಬಾಲಕಿ ವರ್ಷಾ (10) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಊರಿನವರೊಂದಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದರು. ಕ್ಷೇತ್ರ ದರ್ಶನ ಮುಗಿಸಿ ಉಡುಪಿಯತ್ತ ತೆರಳುವಾಗ ಅವರು ಪ್ರಯಾಣಿಸುತ್ತಿದ್ದ ಬಸ್ಸನ್ನು ಚಾಲಕ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಿದ್ದರಿಂದ ಬಸ್ಸಿನಿಂದ ಇಳಿಯುತ್ತಿದ್ದ ಬಾಲಕಿಗೆ ಅದೇ ದಾರಿಯಾಗಿ ಬಂದ ಕಾರು ಢಿಕ್ಕಿ ಹೊಡೆಯಿತು.

ಬಾಲಕಿಯ ತಲೆಗೆ, ಮುಖ, ಸೊಂಟ, ಎಡಕಾಲಿಗೆ ಗಾಯಗಳಾಗಿದ್ದು, ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದುಕೊಂಡು ಹೋಗಲಾಗಿದೆ. ದಿವಾಕರ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next