Advertisement

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

01:32 AM Oct 09, 2024 | Team Udayavani |

ಬೆಳ್ತಂಗಡಿ: ಕಳೆದ ವಾರಗಳಿಂದ ಸಂಜೆ ಬಳಿಕ ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಅ. 8ರಂದು ಕೂಡ ಸಂಜೆ ಬಳಿಕ ಏಕಾಏಕಿ ಭಾರೀ ಮಳೆ ಸುರಿದಿದೆ.

Advertisement

ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಳೆ ಹೆಚ್ಚಾದ ಪರಿಣಾಮ ಮೃತ್ಯುಂಜಯ ಹಾಗೂ ದಿಡುಪೆ ಕಡೆಯಿಂದ ಹರಿಯುವ ನೇತ್ರಾವತಿ ನದಿಯಲ್ಲಿ ಮಂಗಳವಾರ ಸಂಜೆ ನೀರಿನ ಮಟ್ಟ ಒಮ್ಮೆಲೆ ಏರಿಕೆ ಕಂಡುಬಂದಿತ್ತು. ಘಟ್ಟ ಪ್ರದೇಶದಲ್ಲಿ ಸಂಜೆ ನಿರಂತರ ಮಳೆ ಸುರಿದಿದೆ. ಇದರಿಂದ ನೀರು ಏರಿಕೆಯಾಗಿ ಹಲವು ಸಣ್ಣ ಸೇತುವೆಗಳು ಮುಳುಗಡೆ ಯಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಯಾಯಿತು.

ಸಂಜೆ 7ರ ಬಳಿಕ ಏರತೊಡಗಿದ ನೀರು, ರಾತ್ರಿ 9ರ ವರೆಗೂ ಏರಿಕೆ ಕಂಡಿದ್ದು ಬಳಿಕ ಇಳಿಕೆಯಾಗ ತೊಡಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕರಾವಳಿಗೆ ಇಂದು ಎಲ್ಲೋ ಅಲರ್ಟ್‌
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಬಿಡುವು ನೀಡಿದೆ. ಮಂಗಳವಾರ ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗಿದೆ.

ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಅ. 9ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next