Advertisement

Belthangady ಮಾವನಿಗೆ ಸ್ಕೂಟರ್‌ನಲ್ಲಿ ಢಿಕ್ಕಿ ಹೊಡೆಸಿ ಗಂಭೀರ ಗಾಯಗೊಳಿಸಿದ ಅಳಿಯ

11:17 PM Nov 03, 2023 | Team Udayavani |

ಬೆಳ್ತಂಗಡಿ: ಕೌಟುಂಬಿಕ ವಿಚಾರದಲ್ಲಿ ದ್ವೇಷದಿಂದ ಅಳಿಯನೇ ಮಾವನಿಗೆ ಸ್ಕೂಟರ್‌ ಢಿಕ್ಕಿ ಹೊಡೆಸಿ ಕೊಲೆಯತ್ನ ನಡೆಸಿದ ಘಟನೆ ಮಿತ್ತಬಾಗಿಲು ಗ್ರಾಮದ ಕಂಬಳದಡ್ಡ ಎಂಬಲ್ಲಿ ನಡೆದಿದೆ.

Advertisement

ಮಿತ್ತಬಾಗಿಲು ಗ್ರಾಮದ ಕಂಬಳದಡ್ಡ ನಿವಾಸಿ ನಿವಾಸಿ ಕೆ.ಎಚ್‌. ಇಬ್ರಾಹಿಂ (60) ಗಾಯಗೊಂಡವರು. ಇಬ್ರಾಹಿಂ ಅವರ ಪುತ್ರಿ ಗಂಡ ಮುಹಮ್ಮದ್‌ ಶಾಫಿ ಅಪಘಾತಗೊಳಿಸಿದಾತ. ಇಬ್ರಾಹಿಂ ಅವರ ಮಗಳು ಮತ್ತು ಅಳಿಯನ ಮಧ್ಯೆ ಕೌಟುಂಬಿಕ ಸಮಸ್ಯೆ ಇದ್ದು, ಅಳಿಯ ಖರ್ಚಿಗೆ ಹಣವೂ ನೀಡುತ್ತಿರಲಿಲ್ಲ. ಈ ಬಗ್ಗೆ ಅವರನ್ನು ಪರಸ್ಪರ ಸರಿ ಮಾಡಲು ತಂದೆ ಪ್ರಯತ್ನ ನಡೆಸುತ್ತಲೇ ಬಂದಿದ್ದರು ಎನ್ನಲಾಗಿದೆ. ಇದೇ ದ್ವೇಶದಿಂದ ಇಬ್ರಾಹಿಂ ಅವರು ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿತ ಅಳಿಯ ಮುಹಮ್ಮದ್‌ ಶಾಫಿ ದ್ವಿಚಕ್ರ ವಾಹನ ಢಿಕ್ಕಿ ಹೊಡೆಸಿ ಕೊಲೆ ಯತ್ನ ನಡೆಸಿದ್ದಾರೆ.

ಘಟನೆಯಿಂದ ಇಬ್ರಾಹಿಂ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಮುಹಮ್ಮದ್‌ ರಫೀಕ್‌ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next