Advertisement

Belthangady ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಮೃತ್ಯು

12:11 AM Feb 14, 2024 | Team Udayavani |

ಬಂಟ್ವಾಳ ಬೆಳ್ತಂಗಡಿಯಲ್ಲಿ ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಬಂಟ್ವಾಳದಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

Advertisement

ಬೆಳ್ತಂಗಡಿ ಲಾೖಲ ನಿವಾಸಿ ಕೆ.ಎಲ್‌. ವಿಶ್ವನಾಥ ರಾವ್‌ (42) ಮೃತಪಟ್ಟವರು. ಮೂಲತಃ ಬೇಲೂರಿನವರಾದ ಅವರು 20 ವರ್ಷಗಳಿಂದ ಪರವಾನಿಗೆ ಹೊಂದಿದ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅವರಿಗೆ ಮಂಗಳವಾರ ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಬಳಿಕ ತತ್‌ಕ್ಷಣ ಲಾೖಲ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗು ವಂತೆ ಸಲಹೆ ನೀಡಿದ್ದು, ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಅವರು ಬಂಟ್ವಾಳ ತಲುಪುತ್ತಿದ್ದಂತೆ ಮೃತ ಪಟ್ಟರು. ಬಳಿಕ ಬಂಟ್ವಾಳ ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಲೋಬಿಪಿಯಾಗಿರುವ ಕುರಿತು ಸಂಶಯಿಸಲಾಗಿದೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next