Advertisement

ಬೆಳ್ತಂಗಡಿ: ವ್ಯಕ್ತಿಯನ್ನು ಕಡಿದು ಕೊಲೆ

02:47 PM Jan 13, 2022 | Team Udayavani |

ಬೆಳ್ತಂಗಡಿ: ತಾಲೂಕಿನ ರೆಖ್ಯ ಗ್ರಾಮದ ದೇವಸ್ಯ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಡಿದು ಕೊಲೆ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.

Advertisement

‌ಕೊಲೆಯಾದವರನ್ನು ಉದನೆ ಸಮೀಒದ ನೇಲ್ಯಡ ರೆಖ್ಯ ದೇವಸ್ಯ ಎಂಬಲ್ಲಿನ‌ ನಿವಾಸಿ ಸಾಂತಪ್ಪ ಗೌಡ (40) ‌ಎಂದು ತಿಳಿದುಬಂದಿದೆ.

ಸ್ಥಳೀಯ ಜಯಚಂದ್ರ ಎಂಬಾತ ಕೊಲೆಗೈದ ಆರೋಪಿ ಎನ್ನಲಾಗಿದ್ದು, ಆತ ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಇದೆ.

ಆಸ್ತಿ ವೈಷಮ್ಯದಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ‌. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಸಬ್ ಇನ್ಸ್‌ಪೆಕ್ಟರ್ ಕೃಷ್ಣಕಾಂತ್ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next