Advertisement

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

11:44 PM Jun 16, 2024 | Team Udayavani |

ಬೆಳ್ತಂಗಡಿ: ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರದಲ್ಲಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ದರ್ಖಾಸು ಕಜೆಯಲ್ಲಿ ನಡೆದಿದೆ.

Advertisement

ಇಂದಬೆಟ್ಟು ಗ್ರಾಮದ ದರ್ಖಾಸು ನಿವಾಸಿ ಲಕ್ಷ್ಮಣ ಗೌಡ ಮತ್ತು ಜಯಲಕ್ಷ್ಮೀ ದಂಪತಿ ಪುತ್ರಿ 15 ವರ್ಷದ ಬಾಲಕಿ ನಡ ಸರಕಾರಿ ಶಾಲೆಯಲ್ಲಿ ಎಸೆಸೆಲ್ಸಿ ಕಲಿಯುತ್ತಿದ್ದಳು. ತನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಮನನೊಂದು ಜೂ. 14ರಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next