Advertisement

Belthangady ನೆರಿಯ: ಜ್ವರದಿಂದ ಬಳಲಿ ಯುವಕ ಸಾವು

01:05 AM Jan 03, 2024 | Team Udayavani |

ಬೆಳ್ತಂಗಡಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಇಲ್ಲಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ವಸಂತ್‌ (36) ಅವರು ಜ. 2ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಟ್ಟಡ ಕಾರ್ಮಿಕರಾಗಿದ್ದ ಅವರು ಕೆಲವು ವಾರಗಳಿಂದ ಜ್ವರದಿಂದ ಬಳಲುತ್ತಿದ್ದರು.

Advertisement

ಈ ಸಮಯದಲ್ಲಿ ಅವರು ಮಾತ್ರೆ ತೆಗೆದುಕೊಂಡಿದ್ದರು. ಮತ್ತೆ ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಉಜಿರೆ ಖಾಸಗಿ ಆಸ್ಪತ್ರೆಯ ಸೂಚನೆಯಂತೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಅವರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಉಜಿರೆ: ರಸ್ತೆ ಬದಿ ಬಿದ್ದಿದ್ದ ವ್ಯಕ್ತಿ ಸಾವು
ಬೆಳ್ತಂಗಡಿ: ವಿಪರೀತ ಮದ್ಯ ಸೇವಿಸಿ ಉಜಿರೆಯ ರಸ್ತೆ ಬದಿಯಲ್ಲಿ ಗಾಯಗೊಂಡು ಬಿದ್ದಿದ್ದ ತಿರುವನಂತಪುರ ಜಿಲ್ಲೆಯ ನಿವಾಸಿಯಾಗಿರುವ ಸಜಿ (37) ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟ ಘಟನೆ ನಡೆದಿದೆ.

ಓಡಲದಲ್ಲಿ ಡಿ. 30ರಂದು ರಸ್ತೆಬದಿಯಲ್ಲಿ ಬಿದ್ದಿದ್ದ ಈತನ ಬಾಯಿ ಹಾಗೂ ತಲೆಯಲ್ಲಿ ರಕ್ತ ಇದ್ದುದನ್ನು ಕಂಡು ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಈತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಈತ ಬೆಳಾಲಿನ ತೋಟವೊಂದಕ್ಕೆ ಟಾಪಿಂಗ್‌ ಕೆಲಸಕ್ಕೆಂದು ಬಂದಿದ್ದು ವಿಪರೀತ ಮದ್ಯ ಸೇವಿಸುತ್ತಿದ್ದ ಎನ್ನಲಾಗಿದ್ದು ಇದೇ ಕಾರಣಕ್ಕೆ ಮೃತಪಟ್ಟಿರಬಹುದು ಎಂದು ಅನುಮಾನ ಪಡಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next