Advertisement

ಬೆಳ್ತಂಗಡಿ: ವ್ಯಕ್ತಿ ಅನುಮಾನಸ್ಪದ ಸಾವು

11:38 AM Jan 09, 2023 | Team Udayavani |

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯೊಳಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ನೆಕ್ಕರೆ ನಿವಾಸಿ ಗೋಪಾಲ (66) ಅನುಮಾನಸ್ಪದವಾಗಿ ಸಾವನಪ್ಪಿದ ವ್ಯಕ್ತಿ.

ಗೋಪಾಲ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮೃತಪಟ್ಟಿದ್ದಾರೆ. ಅವರ ಇಬ್ಬರು ಪುತ್ರರು ಕೆಲಸದ ನಿಮಿತ್ತ ಹೊರ ಹೋಗಿದ್ದು, ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ರಕ್ತದ ನಡುವಿನಲ್ಲಿ ಮೃತದೇಹವಿದ್ದು, ಆರೋಗ್ಯ ಸಮಸ್ಯೆ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.  ಸ್ಥಳಕ್ಕೆ ವೈದ್ಯಕೀಯ ತಂಡ ಆಗಮಿಸಿ ಮೃದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಪ್ರಕ್ರಿಯೆ ಕೈಗೊಂಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next