Advertisement

Belthangady: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ; ಇಬ್ಬರ ಬಂಧನ

08:12 PM Aug 24, 2024 | Team Udayavani |

ಬೆಳ್ತಂಗಡಿ: ಬೆಳಾಲು ಗ್ರಾಮದ ಎಸ್‌.ಪಿ.ಬಿ. ಕೌಂಪೌಂಡ್‌ ನಿವಾಸಿ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯ ಎಸ್‌.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶನಿವಾರ(ಆ.24ರಂದು) ಬಂಧಿಸಲಾಗಿದೆ.

Advertisement

ಘಟನೆ ಹಿನ್ನೆಲೆ: ಮಂಗಳವಾರ(ಆ.20ರಂದು) ಬೆಳಾಲು ಗ್ರಾಮದ ಎಸ್‌.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ಮನೆಯಲ್ಲಿದ್ದಾಗ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿ ಆಗಿದ್ದರು. ಮನೆ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ, ಸ್ಥಳದಿಂದ ಪರಾರಿ ಆಗಿದ್ದರು. ಈ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಮೃತಪಟ್ಟ ಬಾಲಕೃಷ್ಣ ಅವರ ಕಿರಿಯ ಪುತ್ರ ಸುರೇಶ್‌ ಭಟ್‌ ಆ. 20ರಂದು ರಾತ್ರಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧಿಸಿ ಕೇರಳ ಮೂಲದ ಇಬ್ಬರು ಆರೋಪಿಗಳಾದ ಮುರಳೀಕೃಷ್ಣ (21), ರಾಘವೇಂದ್ರ.ವಿ (58) ಅವರನ್ನು ಪೊಲೀಸರು ಶನಿವಾರ ಬಂಧಿಸಿ ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ.

ಕೊಲೆಯಾದ ಬಾಲಕೃಷ್ಣ ಬಡೆಕಿಲ್ಲಾಯ ಅವರ ಪತ್ನಿ ದಿ.ಲೀಲಾಲವರ ಒಡವೆಗಳನ್ನು ಬ್ಯಾಂಕ್ ಲಾಕರ್ ನಲ್ಲಿರಿಸಿದ್ದು ಸದ್ರಿ ಒಡವೆಗಳನ್ನು ಮಗಳು ವಿಜಯಲಕ್ಷ್ಮಿಯವರಿಗೆ ನೀಡಬೇಕೆನ್ನುವ ವಿಚಾರದಲ್ಲಿ ಬಾಲಕೃಷ್ಣ ಬಡೆಕಿಲ್ಲಾಯ ಅವರನ್ನು  ಅಳಿಯ (ಮಗಳ ಗಂಡ) ಹಾಗೂ ಮೊಮ್ಮಗ(ಮಗಳ ಮಗ) ಕೊಲೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next