Advertisement

ನಾಳೆಯಿಂದ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಅಂತ್ಯ :ಸಿಎಂ ಯಡಿಯೂರಪ್ಪ 

10:12 AM Dec 09, 2019 | Naveen |

ಬೆಳ್ತಂಗಡಿ: ನಾಳೆಯಿಂದ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಅಂತ್ಯವಾಗಲಿದೆ. ಹದಿನೈದು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Advertisement

ಅವರು ಭಾನುವಾರದಂದು ಉಜಿರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಗೊಳಿಸಿ ಮಾತನಾಡುತ್ತಾ ಇನ್ನು ಮೂರೂವರೆ ವರ್ಷಗಳ ಕಾಲ ನಮ್ಮದೇ ಸರ್ಕಾರ. ಉಪಚುನಾವಣೆ ಫಲಿತಾಂಶದಲ್ಲಿ ಗೆಲ್ಲಲು ಧರ್ಮಸ್ಥಳ ಮಂಜುನಾಥ ಆಶೀರ್ವಾದ ನೀಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಗೆದ್ದರೇ ಕೇವಲ ತಲಾ ಒಂದು ಸ್ಥಾನ ಗಳಿಸಬಹುದು. ಉಪಚುನಾವಣೆಯಲ್ಲಿ ಬಿಜೆಪಿಗೇ ಬಹುಮತ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ.ಭರತ್ ಉಪಸ್ಥಿತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next