Advertisement

ಬೆಳ್ತಂಗಡಿ ತಾ|ಗ್ರಂಥಾಲಯಕ್ಕಿಲ್ಲ ಸುಸಜ್ಜಿತ ಕಟ್ಟಡ

11:47 PM Oct 05, 2019 | Team Udayavani |

ಬೆಳ್ತಂಗಡಿ : ಹಲವಾರು ದಶಕಗ ಳಿಂದ ಓದುಗರನ್ನು ತನ್ನತ್ತ ಸೆಳೆಯುತ್ತಿದ್ದ ತಾಲೂಕು ಸಾರ್ವಜನಿಕ ಗ್ರಂಥಾಲಯ ಕಟ್ಟಡ ಅಪಾಯಕಾರಿ ಹಂತ ತಲುಪಿರುವುದ ರಿಂದ ಓದುಗರು ಆತಂಕದಲ್ಲಿ ಸಮಯ ಕಳೆಯುವಂತಾಗಿದೆ.

Advertisement

ಓದುಗರು ಪ್ರತಿನಿತ್ಯ ಜ್ಞಾನ ಭಂಡಾರದ ಆಸರೆ ಪಡೆದಿದ್ದಾರೆ. ಇತ್ತ ಕಟ್ಟಡದ ಛಾವಣಿ ಹಾಗೂ ಗೋಡೆ ಬಿರುಕು ಬಿಟ್ಟಿದ್ದು, 50 ವರ್ಷಗಳಿಗೂ ಹೆಚ್ಚು ಹಳೆಯದಾದ ಕಟ್ಟಡ ದಲ್ಲಿ ಕುಳಿತು ಓದಲು ಆತಂಕ ಸ್ಥಿತಿ ನಿರ್ಮಾಣ ವಾಗಿದೆ. 40 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಪುಸ್ತಕಗಳಿದ್ದು, 2,500 ಮಂದಿ ಸದಸ್ಯತ್ವ ಹೊಂದಿರುವ ಹೆಗ್ಗಳಿಗೆ ತಾಲೂಕು ಗ್ರಂಥಾಲಯದ್ದಾಗಿದೆ.

57 ಸಾವಿರ ರೂ.
ಮೌಲ್ಯದ ಪುಸ್ತಕ ಸಂಗ್ರಹ
ನಿತ್ಯ ಓದುಗರು ಆಸಕ್ತಿಯಿಂದ ಬರುತ್ತಿದ್ದಾರೆ. ಅನೇಕ ಖ್ಯಾತ ಲೇಖಕರ ಸುಮಾರು 40 ಸಾವಿರ ಪುಸ್ತಕಗಳಿದ್ದು, ತಿಂಗಳಿಗೆ 37 ಮ್ಯಾಗಜಿನ್‌ಗಳು, ಪ್ರತಿದಿನ 10ಕ್ಕೂ ಹೆಚ್ಚು ಪತ್ರಿಕೆಗಳು ಬರುತ್ತಿವೆ. ಆದರೆ ಇಲ್ಲಿನ ಸ್ಥಿತಿಗತಿಯಿಂದಾಗಿ ಬರುವ ಓದುಗರ ಸಂಖ್ಯೆ ಕಡಿಮೆಯಾಗಿದೆ.

ಬಿರುಕು ಬಿಟ್ಟ ಕಟ್ಟಡ
ಹಲವಾರು ದಶಕಗಳನ್ನು ಕಂಡ ಗ್ರಂಥಾಲಯದ ಕಟ್ಟಡ ಛಾವಣಿ ಸೋರದಂತೆ ಟರ್ಪಾಲು ಹಾಸಲಾಗಿದೆ. ಮಳೆ ಪ್ರಮಾಣ ಹೆಚ್ಚಾದಲ್ಲಿ ಗ್ರಂಥಾಲಯ ಪುಸಕ್ತಗಳು ಒದ್ದೆಯಾಗುತ್ತಿವೆ. ಕಟ್ಟಡ ಹಿಂಬದಿ ಬಿರುಕು ಬಿಟ್ಟು ಅಪಾಯಕಾರಿ ಯಾಗಿದ್ದು, ಕುಸಿಯುವ ಮುನ್ನ ಹೊಸ ಕಟ್ಟಡಕ್ಕೆ ಸ್ಥಳಾಂತರ ಇಲ್ಲವೇ ನೂತನ ಕಟ್ಟಡ ರಚನೆಗೆ ನಿವೇಶ‌ನ ಒದಗಿಸುವಲ್ಲಿ ಸಂಬಂಧಪಟ್ಟವರು ಗಮನ ಹರಿಸಬೇಕಿದೆ.

ಕಟ್ಟಡದ ಸುತ್ತಮುತ್ತ ಗಿಡಗಂಟಿ
ಕಟ್ಟಡದ ಹಿಂಬದಿ ಗಿಡಗಂಟಿ, ಛಾವಣಿ ಮಧ್ಯ ಬಳ್ಳಿಗಳು ಆವರಿಸಿವೆ. ಕಸಕಡ್ಡಿಗಳು ಸುತ್ತಮುತ್ತ ತುಂಬಿದ್ದು, ಇದರ ಬದಿಯಲ್ಲೇ ಇರುವ ಪಾಳುಬಾವಿಯಲ್ಲಿ ಮದ್ಯದ ಬಾಟಲಿಗಳು ತುಂಬಿದ್ದು, ಓದುಗರಿಗೆ ಮುಜುಗರ ಉಂಟುಮಾಡುವಂತಿದೆ.

Advertisement

ಪೀಠೊಪಕರಣ
ಬದಲಾವಣೆ ಕೂಗು
40 ಸಾವಿರದಷ್ಟು ಪುಸ್ತಕಗಳ ಹೊರೆ ಹೊತ್ತ ಪೀಠೊಪಕರಣಗಳು ಮಳೆ ನೀರು ಬಿದ್ದು ತುಕ್ಕು ಹಿಡಿದಿವೆ. ಹೊಸ ರ್ಯಾಕ್‌ ನಿರ್ಮಿಸುವಂತೆ ಓದುಗರು ಪ್ರತಿನಿತ್ಯ ವಿನಂತಿಸಿದರೂ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ.

ಕಟ್ಟಡ ಹಿಂಬದಿ ಬೃಹತ್‌ ಮರಗಳಿವೆ. ಮಂಗಗಳ ಹಾವಳಿಯಿಂದ ಹೆಂಚು ಹಾಳಾಗಿವೆ. ಮರದ ಕೊಂಬೆ ಕಡಿಯದೆ ಮಳೆ-ಗಾಳಿಗೆ ಬಿದ್ದರೆ ಗ್ರಂಥಾಲಯ ಕಟ್ಟಡ ನೆಲಸಮವಾಗುವ ಭೀತಿಯಿದೆ.

ಮಂಜೂರಾದ 50 ಲಕ್ಷ ರೂ. ಮಾಯ
ಗ್ರಂಥಾಲಯಕ್ಕೆ ನ.ಪಂ. ಬಳಿ ನಿವೇಶನ ಕಾದಿರಿಸಿದ್ದು, ಸರಕಾರವು ಸುಸಜಿತ ಕಟ್ಟಡಕ್ಕಾಗಿ 50 ಲಕ್ಷ ರೂ. ಮಂಜೂರುಗೊಳಿಸಿದ್ದು ಶೀಘ್ರ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಕಳೆದ 3 ವರ್ಷಗಳ ಹಿಂದೆ ಗ್ರಂಥಾಲಯ ಸಪ್ತಾಹ ಅಭಿಯಾನ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಆದರೆ ಮಂಜೂರುಗೊಂಡ 50 ಲಕ್ಷ ರೂ. ಎಲ್ಲಿ ವಿನಿಯೋಗವಾಗಿದೆ ಎಂಬುದೇ ಪ್ರಶ್ನೆಯಾಗಿದೆ.

 ಶಾಸಕರ ಭರವಸೆ
ಗ್ರಂಥಾಲಯ ಕಟ್ಟಡಕ್ಕಾಗಿ ನಿವೇಶನ ನೀಡುವಂತೆ ಈಗಾಗಲೇ ಶಾಸಕರಲ್ಲಿ ಮನವಿ ಮಾಡಲಾಗಿದೆ. ನಿವೇಶನ ಗುರುತಿಸುವುದಾಗಿ ಭರವಸೆ ನೀಡಿದ್ದಾರೆ. ಬಳಿಕ ಅನುದಾನಕ್ಕೆ ಅಂದಾಜು ಪಟ್ಟಿ ಕಳುಹಿಸಲು ಅನುಕೂಲವಾಗಲಿದೆ. ಗ್ರಂಥಾಲಯ ದಿಂದ ಆದಾಯ ಇಲ್ಲದಿರುವುದರಿಂದ ಸರಕಾರಿ ಕಟ್ಟದಲ್ಲೂ ಸ್ಥಳಾವಕಾಶ ನೀಡಲು ಹಿಂಜರಿಯುತ್ತಿರುವುದು ಸಮಸ್ಯೆಯಾಗಿದೆ. ಪುಸ್ತಕ ರಕ್ಷಣೆಗೆ ಹೊಸ ಪಿಠೊಪಕರಣ ಒದಗಿಸಲಾಗುವುದು.
– ಮಮತಾ ರೈ ಪ್ರಭಾರ ಗ್ರಂಥಾಲಯ ಅಧಿಕಾರಿ, ಮಂಗಳೂರು

 ಮಂಜೂರಿಗೆ ಪ್ರಯತ್ನ
ಓದುಗರ ಅನುಕೂಲಕ್ಕಾಗಿ ಹೊಸ
ಕಟ್ಟಡ ನಿರ್ಮಾಣ ಮಾಡಲು ಈಗಾಗಲೇ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಸಂಬಂಧಪಟ್ಟ ಸಚಿವರನ್ನು ಒತ್ತಾಯಿಸಿ ಅನುದಾನ ಹಾಗೂ ನಿವೇಶನ ಮಂಜೂರಿಗೆ ಪ್ರಯತ್ನಿಸಲಾಗುತ್ತಿದೆ.
– ಹರೀಶ್‌ ಪೂಂಜ ಶಾಸಕರು

-  ಚೈತ್ರೇಶ್‌ ಇಳಂತಿಲ

Advertisement

Udayavani is now on Telegram. Click here to join our channel and stay updated with the latest news.

Next