Advertisement

Belthangady; ಜಾರಿ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

08:32 PM Sep 02, 2024 | Team Udayavani |

ಬೆಳ್ತಂಗಡಿ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

Advertisement

ಉಜಿರೆ ರಥಬೀದಿ ಸಮೀಪದ ನಿವಾಸಿ ಸುಪ್ರಭಾ ಪಿ. (40) ಮೃತ ಶಿಕ್ಷಕಿ. ಚಾರ್ಮಾಡಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ತಮ್ಮ ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟರು. ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next