Advertisement

Belthangady: 2 ತಿಂಗಳಿಂದ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ

10:04 AM Sep 01, 2024 | Team Udayavani |

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ನಡೆದಿದೆ.

Advertisement

ಸವಣಾಲು ಗ್ರಾಮದಲ್ಲಿ ಕಳೆದ 2 ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ.

ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೆರೆಯಾಗಿದ್ದು, ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next