Advertisement

Belthangady ನೀರಿನ ಟ್ಯಾಂಕರ್‌ ಪಲ್ಟಿ: ಕಾರ್ಮಿಕ ಸಾವು

10:13 PM Mar 02, 2024 | Team Udayavani |

ಬೆಳ್ತಂಗಡಿ: ಕೊಕ್ಕಡದಲ್ಲಿ ನೀರಿನ ಟ್ಯಾಂಕರ್‌ ಪಲ್ಟಿಯಾಗಿ ಕಾರ್ಮಿಕ, ಹಾವೇರಿ ನಿವಾಸಿ ಸುರೇಶ್‌ ಮಲ್ಲಪ್ಪ ಹೊಸಮನಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

Advertisement

ಕೊಕ್ಕಡ ಗ್ರಾಮದ ಮೈಪಾಳದಲ್ಲಿ ವೆಂಟೆಡ್‌ ಡ್ಯಾಮಿನ ಕಾಮಗಾರಿ ನಡೆಯುತ್ತಿದೆ. ನೀರು ತುಂಬಿಕೊಂಡು ಬರುತ್ತಿದ್ದಾಗ ಚಾಲಕ ಸುರೇಶ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮವಾಗಿ ಟ್ಯಾಂಕರ್‌ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಟ್ಯಾಂಕರ್‌ನಡಿಯಲ್ಲಿ ಸಿಲುಕಿದ ಸುರೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಮಂಜಪ್ಪ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next