Advertisement

ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು: ಕಿಡಿಕಾರಿದ ಬೇಳೂರು ಗೋಪಾಲಕೃಷ್ಣ

10:04 AM Mar 15, 2020 | keerthan |

ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು. ಕೇಂದ್ರ ಸರ್ಕಾರದ ಬಗ್ಗೆ ಹೊಗಳಿ ಮಾತನಾಡುತ್ತಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸೈನಿಕರು ಸತ್ತಿಲ್ಲವೇ? ಪುಲ್ವಾಮಾ ದಾಳಿಯಲ್ಲೇ 40ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ ಎಂದರು.

ಈರುಳ್ಳಿ ಬೆಲೆ 200 ರೂಪಾಯಿ ತಲುಪಿದಾಗ ಈ ಇಬ್ಬರು ಎಲ್ಲಿಗೆ ಹೋಗಿದ್ದರು, ಏಕೆ ಮಾತನಾಡಲಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದರೂ ತುಟಿಬಿಚ್ಚುತ್ತಿಲ್ಲ. ಇದೇನಾ ಅಚ್ಛೇ ದಿನ್ ಎಂದು ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.

ಎಸ್.ಎಲ್.ಬೈರಪ್ಪ ಬಿಜೆಪಿಯ ಏಜೆಂಟ್ ಹಾಗಾಗಿಯೇ ಅವರ ಹೆಸರಿನಲ್ಲಿ ಬಜೆಟ್ ನಲ್ಲಿ ಐದುಕೋಟಿ ಮೀಸಲಿಟ್ಟಿದ್ದಾರೆ. ಆದರೆ ಭೈರಪ್ಪ ಅವರ ಗ್ರಾಮಕ್ಕೆ ಯಾವ ಉದ್ದೇಶಕ್ಕೆ ಹಣ ನೀಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಶಾಲೆಗಳೇ ಇಲ್ಲ. ಭೈರಪ್ಪ ಅವರ ಊರಿಗೆ ನೀಡಿದ ಅನುದಾನವನ್ನು ಉತ್ತರ ಕರ್ನಾಟಕದ ಶಾಲೆಗಳಿಗೆ ನೀಡಬಹುದಿತ್ತು ಎಂದರು.

ನಲಪಾಡ್ ಕಾರು ಆಕ್ಸಿಡೆಂಟ್ ಆದಾಗ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡಿದ್ದರು. ಅದೇ ಅಶೋಕ್ ಕಾರು ಅಪಘಾತವಾದಾಗ ಯಾರೂ ಚಕಾರವೆತ್ತಲಿಲ್ಲ. ನಲಪಾಡ್ ಪ್ರಕರಣದಲ್ಲಿ ಮಾತನಾಡಿದ್ದ ಆರ್.ಅಶೋಕ್ ತನ್ನ ಮಗನ ಕಾರು ಅಪಘಾತವಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.

Advertisement

ಶರತ್ ಬಚ್ಚೇಗೌಡ ಪಕ್ಷದಿಂದ ದೂರ ಹೋದರೆ ಪಕ್ಷಕ್ಕೆ ತಾಯಿಗೆ ದ್ರೋಹ ಮಾಡಿದಂತೆ ಎಂದು ಸಿ.ಟಿ.ರವಿ ಹಾಗೂ ಆರ್.ಅಶೋಕ್ ಹೇಳುತ್ತಾರೆ. ಅದೇ ಕಾಂಗ್ರೆಸ್ ನ 17 ಜನ ಶಾಸಕರನ್ನು ಬಿಜೆಪಿಗೆ ಸೆಳೆದರು ಅದಕ್ಕೇನು ಹೇಳುತ್ತಾರೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next