Advertisement

Bengal;ಸಂದೇಶಖಾಲಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ: ಬಿಜೆಪಿ ರಾಜ್ಯಾಧ್ಯಕ್ಷ ಆಸ್ಪತ್ರೆಗೆ

06:16 PM Feb 14, 2024 | Team Udayavani |

ಕೋಲ್ಕತಾ: ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಬೆಂಬಲಿಗರು ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಿಳಿದಿರುವ ಸಂದೇಶ್‌ಖಾಲಿಗೆ ಪ್ರವೇಶಿಸದಂತೆ ತಡೆದಾಗ ಪಕ್ಷದ ಕಾರ್ಯಕರ್ತರು ಪೊಲೀಸ್ ಸಿಬಂದಿಯೊಂದಿಗೆ ಘರ್ಷಣೆ ನಡೆದ ಕಾರಣ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಗಾಯಗೊಂಡಿದ್ದಾರೆ.

Advertisement

ಉತ್ತರ 24 ಪರಗಣ ಜಿಲ್ಲೆಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಪೊಲೀಸರೊಂದಿಗೆ ವಾಗ್ವಾದದ ಸಂದರ್ಭದಲ್ಲಿ, ಲೋಕಸಭಾ ಸಂಸದರೂ ಆದ ಮಜುಂದಾರ್ ನಿಯಂತ್ರಣ ಕಳೆದುಕೊಂಡು ಅವರು ನಿಂತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ.ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ನಾಯಕರು ಸಂದೇಶಖಾಲಿ ಕಡೆಗೆ ತೆರಳದಂತೆ ತಡೆಯಲು ಭಾರೀ ಪೊಲೀಸ್ ಬಂದೋಬಸ್ತ್ ಮಾಡಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಬಿಜೆಪಿ ನಾಯಕರು ನಿಷೇಧಾಜ್ಞೆಗಳನ್ನು ಧಿಕ್ಕರಿಸಿ ಸಂದೇಶಖಾಲಿ ಕಡೆಗೆ ಪ್ರತಿಭಟನಾ ಮೆರವಣಿಗೆಯನ್ನು ಮುಂದುವರೆಸಿದ ಕಾರಣ ಪೊಲೀಸರೊಂದಿಗೆ ಸಂಘರ್ಷದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next