Advertisement

ಹಿಂಸಾಚಾರದ ವಿರುದ್ಧ ನಾಳೆ ರಾಜ್ ಘಾಟ್ ನಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ : ಘೋಷ್

06:34 PM Jul 23, 2021 | Team Udayavani |

ನವ ದೆಹಲಿ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ವಿರುದ್ಧವಾಗಿ ರಾಷ್ಟ್ರ ರಾಜಧಾನಿ ನವ ದೆಹಲಿಯ ರಾಜ್ ಘಾಟ್ ನಲ್ಲಿ ನಾಳೆ (ಗುರುವಾರ, ಜುಲೈ 22) ಪ್ರತಿಭಟನೆ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಎಚ್ಚರಿಕೆ ನೀಡಿದ್ದಾರೆ.

Advertisement

ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ಎ ಎನ್ ಐ ನೊಂದಿಗೆ ಮಾತನಾಡಿದ ಘೋಷ್,  ಕಳೆದ ಏಳು ವರ್ಷಗಳಲ್ಲಿ 175 ಬಿಜೆಪಿ ಕಾರ್ಯಕರ್ತರು ಹಿಂಸಾಚಾರದಿಂದ ಮೃತಪಟ್ಟಿದ್ದಾರೆ. ಪಕ್ಷಕ್ಕಾಗಿ ಕಾರ್ಯ ನಿರ್ವಹಿಸಿದ ಕಾರ್ಯಕರ್ತರ ಸಾವಿಗೆ ಯಾವುದೇ ರೀತಿಯ ನ್ಯಾಯ ದೊರಕಿಲ್ಲ. ರಾಜ್ಯದಲ್ಲಿ ಹಿಂಸಾಚಾರ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಹಾಗಾಗಿ ರಾಜ್ಯ ಬಿಜೆಪಿ ಘಟಕ ರಾಷ್ಟ್ರ ರಾಜಧಾನಿಯ ರಾಜ್ ಘಾಟ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಮಾಹಿತ ನೀಡಿದ್ದಾರೆ.

ಇದನ್ನೂ ಓದಿ : CM ಸ್ಥಾನದಿಂದ ಬಿಎಸ್ವೈ ಪದಚ್ಯುತಿ ಮಾಡಿದರೆ ಬಿಜೆಪಿ ತಕ್ಕ ಶಾಸ್ತಿ ಅನುಭವಿಸಲಿದೆ:ಮನಗೂಳಿಶ್ರೀ

ಮೂರು ವರ್ಷಗಳ ಹಿಂದೆ ರಾಜ್ ಘಾಟ್ ನಲ್ಲಿ ಇಂತದ್ದೇ ಪ್ರತಿಭಟನೆಯನ್ನು ಪಕ್ಷ ಆಯೋಜಿಸಿತ್ತು. ಈಗ ಮತ್ತೆ ಹಿಂಸಾಚಾರದ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಮುಂಗಾರು ಅಧಿವೇಶನದಲ್ಲಿ ಇರುವ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಪೆಗಾಸಸ್ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಸೇರಿ ವಿರುದ್ಧ ಪಕ್ಷಗಳು ಪೆಗಾಸಸ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯನ್ನು ಆರೋಪಿಸುತ್ತಿವೆ. ಅವರ ಆರೋಪಗಳು ಆಧಾರ ರಹಿತವಾಗಿದೆ ಎಂದು ಜನರಿಗೆ ಗೊತ್ತಿದೆ. ಪ್ರಚಾರದಲ್ಲಿ ಇರಬೇಕು ಎಂಬ ದೃಷ್ಟಿಯಿಂದ ಮಾತ್ರ ಬಿಜೆಪಿ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

Advertisement

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ದೆಹಲಿ ಭೇಟಿಯ ಬಗ್ಗೆ ಸುದ್ದಿ ಸಂಸ್ಥೆ ಎಎನ್ ಐ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2019 ರ ಲೋಕಸಭೆಯ ಮೊದಲು ಅವರು ಕೋಲ್ಕತ್ತಾದ ಎಲ್ಲಾ ಪಕ್ಷಗಳನ್ನು ಕರೆದು ದೊಡ್ಡ ಪ್ರತಿಭಟನೆ ನಡೆಸಿದರು. ಫಲಿತಾಂಶವೇನಾಯಿತು ? ಲೋಕಸಭಾ ಚುನಾವಣೆಯಲ್ಲಿ ಅವರು ತಮ್ಮ 12 ಸ್ಥಾನಗಳನ್ನು ಕಳೆದುಕೊಂಡರು. ಅವರ ಪಕ್ಷವು ಪತನದ ಹಾದಿಯಲ್ಲಿದೆ. ಅವರು ಪ್ರಧಾನಿಯಾಗಬೇಕು ಮತ್ತು ದೇಶವನ್ನು ಮುನ್ನಡೆಸಬೇಕು ಎಂದು ಕನಸು ಕಂಡಿದ್ದರು. ಅದು ಆಗಲಿಲ್ಲ. ತ್ರಿಪುರ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿಯೂ ಅಸ್ತಿತ್ವ ಕುಗ್ಗುತ್ತಿದೆ. ರಾಜ್ಯದಲ್ಲಿ ಮತ್ತೆ ಮಮತಾ ಬ್ಯಾನರ್ಜಿ ಸರ್ಕಾರವು ತನ್ನ ಆಡಳಿತದಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಬಂಗಾಳದಲ್ಲಿ ಹಿಂಸಾಚಾರ ಮತ್ತು ಭ್ರಷ್ಟಾಚಾರಗಳು ವಿಪರೀತವಾಗಿವೆ. ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಅವರು ದೆಹಲಿಗೆ ಬರುತ್ತಿದ್ದಾರೆ. ಬರಲಿ ಮಾಧ್ಯಮಗಳ ಪ್ರಚಾರವನ್ನು ಪಡೆದುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್:ಬಿಜೆಪಿಯ ಅಭಿವೃದ‍್ದಿ ಯೋಜನೆಗಳನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ: ಧಾಮಿ

Advertisement

Udayavani is now on Telegram. Click here to join our channel and stay updated with the latest news.

Next