Advertisement

ಪತಿ ಕೊಂದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ

10:46 AM May 20, 2023 | Team Udayavani |

ಮಹದೇವಪುರ: ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿರುಗಟ್ಟಿಸಿ ಹತ್ಯೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಮಮತಾ ಹಾಗೂ ಹರೀಶ್‌ ಬಂಧಿತರು. ಆನಂದ್‌ ಕೊಲೆಯಾದವ.

ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸ್ನಾನದ ಕೋಣೆಯಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್‌ ಶವ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಮರಣೋತ್ತರ ಮರೀಕ್ಷೆ ವೇಳೆ ಪತ್ನಿಯ ಕಳ್ಳಾಟ ಬಯಲಾಗಿದೆ.

ಪ್ರಿಯಕರ ಹರೀಶ್‌ ಜತೆ ಜೀವನ ಮಾಡಲು ಇಷ್ಟ ಪಟ್ಟಿದ್ದ ಮಮತಾ ಆತನೊಂದಿಗೆ ಸೇರಿ ಗಂಡ ಆನಂದ್‌ನ ಹತ್ಯೆಗೆ ಸಂಚು ರೂಪಿಸಿದ್ದಳು. ಅದರಂತೆ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ಆನಂದ್‌ಗೆ ಕೊಟ್ಟಿದ್ದಳು. ಆನಂದ್‌ ನಿದ್ದೆಗೆ ಜಾರಿದ ಬಳಿಕ ಪ್ರಿಯಕರನ ಜತೆಗೆ ಸೇರಿಕೊಂಡು ರೈಲ್ವೆ ಹಳಿ ಮೇಲೆ ಆನಂದ್‌ ದೇಹ ಇರಿಸುವ ಸಂಚು ರೂಪಿಸಿದ್ದರು. ಆದರೆ, ಆ ವ್ಯಕ್ತಿ ಹೆಚ್ಚು ತೂಕವಿದ್ದ ಹಿನ್ನೆಲೆಯಲ್ಲಿ ಆತನನ್ನು ಸಾಗಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಉಸಿರುಗಟ್ಟಿಸಿ ಆತನನ್ನು ಹತ್ಯೆ ಮಾಡಿದ್ದರು. ಬಳಿಕ ಮೃತದೇಹವನ್ನು ಸ್ನಾನದ ಕೋಣೆಯಲ್ಲಿ ಇರಿಸಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದಂತೆ ಬಿಂಬಿಸಿದ್ದರು.

ಬಳಿಕ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದರು. ಇತ್ತ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆನಂದ್‌ಗೆ ನಿದ್ರೆ ಮಾತ್ರೆ ನೀಡಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದಿರುವುದು ಪತ್ತೆಯಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಅನಿತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next