Advertisement

Bengaluru: ತಾಯಿಯನ್ನು ಹತ್ಯೆಗೈದು ಪೊಲೀಸರಿಗೆ ಶರಣಾದ 17 ರ ಪುತ್ರ!

07:22 PM Feb 02, 2024 | Team Udayavani |

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಲ್ಲಿ 40 ವರ್ಷದ ಮಹಿಳೆಯನ್ನು ಆಕೆಯ ಅಪ್ರಾಪ್ತ ವಯಸ್ಕ ಮಗನೇ ಹತ್ಯೆಗೈದ ಘಟನೆ ಶುಕ್ರವಾರ (ಫೆ 2)ಬೆಳಗ್ಗೆ 7.30ರ ಸುಮಾರಿಗೆ ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮಯ್ಯ ಲೇಔಟ್​​ನಲ್ಲಿ ನಡೆದಿದೆ.

Advertisement

ಪೊಲೀಸರ ಪ್ರಕಾರ, ಮುಳಬಾಗಿಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಯಾಗಿರುವ 17 ವರ್ಷದ ಬಾಲಕ ತನ್ನ ತಾಯಿ ನೇತ್ರಾ (40) ತಲೆಗೆ ರಾಡ್‌ನಿಂದ ಹೊಡೆದು ಹತ್ಯೆಗೈದು ನಂತರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮನೆಯಲ್ಲಿ ಇಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ತನ್ನ ತಾಯಿ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಸರಿಯಾದ ಆಹಾರವನ್ನು ನೀಡುತ್ತಿರಲಿಲ್ಲ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದ ವೇಳೆ ತಾಯಿ ಗದರಿಸಿದ್ದು ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೋಪದ ಭರದಲ್ಲಿ ತಾಯಿಯ ತಲೆಗೆ ಲೋಹದ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ಬಾಲಕನನ್ನು ವಶಕ್ಕೆ ಪಡೆದಿದ್ದೇವೆ. ಹುಡುಗನಿಗೆ ಒಬ್ಬಳು ಅಕ್ಕ ಇದ್ದಾಳೆ, ಅವಳು ಜಾರ್ಜಿಯಾದಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next