Advertisement

Bengaluru: ಜಾತಿ ನಿಂದನೆ ಆರೋಪ: ವಕೀಲ ಜಗದೀಶ್‌ ಬಂಧನ

12:26 PM Aug 30, 2024 | Team Udayavani |

ಬೆಂಗಳೂರು: ಜಾತಿ ನಿಂದನೆ ಆರೋಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ವಕೀಲ ಕೆ.ಎನ್‌.ಜಗದೀಶ್‌ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಗೋವಾದಲ್ಲಿ ಬಂಧಿಸಿದ್ದಾರೆ.

Advertisement

2022ರಲ್ಲಿ ವಕೀಲ ಜಗದೀಶ್‌ ವಿರುದ್ಧ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಗದೀಶ್‌ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಬಹಳಷ್ಟು ಬಾರಿ ನೋಟಿಸ್‌ ಜಾರಿಗೊಳಿಸಿದರೂ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್‌ ಇತ್ತೀಚೆಗೆ ಜಗದೀಶ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜಗದೀಶ್‌ ಗೋವಾದಲ್ಲಿರುವ ಮಾಹಿತಿ ಇದ್ದು, ಒಂದು ತಂಡ ತೆರಳಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next