Advertisement

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

03:26 PM Oct 18, 2024 | Team Udayavani |

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ ಎಎಸ್‌ಐ ಹೃದಯ ಘಾತದಿಂದ ಮೃತಪಟ್ಟಿದ್ದಾರೆ.

Advertisement

ನೆಲಮಂಗಲ ಮೂಲದ ಶಿವಶಂಕರಾಚಾರಿ(48) ಮೃತ ಎಎಸ್‌ಐ.

ಗುರುವಾರ ಬೆಳಗ್ಗೆ ಎಂದಿನಂತೆ ಕರ್ತವ್ಯ ಹಾಜರಾಗಿದ್ದ ಶಿವಶಂಕರಾಚಾರಿ ಅವರು, ಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಕೆಮ್ಮು ಹೆಚ್ಚಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಅವರು 1999ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next