Advertisement

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

01:05 AM May 30, 2024 | Team Udayavani |

ಕೊಕ್ಕಡ: ಇಲ್ಲಿನ ಸೌತಡ್ಕ ಸಮೀಪದ ಗೇರು ಹಾಡಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 29ರಂದು ತಡವಾಗಿ ಬೆಳಕಿಗೆ ಬಂದಿದೆ.

Advertisement

ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ನಿಂಗಪ್ಪ (64) ಎಂದು ಗುರುತಿಸಲಾಗಿದೆ. ಈತ ಸುಮಾರು 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಟಿಎಂ ಕಾರ್ಡ್‌ ಮೂಲಕ ಸಂಬಂಧಿಕರ ಪತ್ತೆ
ಸೌತಡ್ಕ ಸಮೀಪದ ಗೇರು ಹಾಡಿಯಲ್ಲಿ ವ್ಯಕ್ತಿಯೋರ್ವ ನೇಣು ಹಾಕಿಕೊಂಡಿರುವ ಬಗ್ಗೆ ಸ್ಥಳೀಯರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಠಾಣಾಧಿಕಾರಿ ಹಾಗೂ ಸಿಬಂದಿ ಪರಿಶೀಲನೆ ನಡೆಸಿದಾಗ, ಆತ ಧರಿಸಿಕೊಂಡಿದ್ದ ಅಂಗಿಯಲ್ಲಿ ಎಟಿಎಂ ಕಾರ್ಡ್‌ ದೊರಕಿತ್ತು. ಆ ಮೂಲಕ ಆತನ ಹೆಸರು ಮತ್ತು ವಿಳಾಸವನ್ನು ಪತ್ತೆ ಹಚ್ಚಲಾಯಿತು.

ಧರ್ಮಸ್ಥಳ ಪೊಲೀಸರು ಪರಿಶೀಲಿಸಿದಾಗ ಈತ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಆತನ ಕುಟುಂಬಸ್ಥರು ಮೇ 27ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ನಿಂಗಪ್ಪ ಕುಟುಂಬಸ್ಥರಿಗೆ ಈತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next