Advertisement

Bengaluru: ಗೀತೋತ್ಸವ ಕಾರ್ಯಕ್ರಮಕ್ಕೆ ಭೂಮಿಪೂಜೆ

06:49 PM Dec 19, 2023 | Team Udayavani |

ಉಡುಪಿ: ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೋಟಿಗೀತಾ ಲೇಖನಯಜ್ಞ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಬಸವನಗುಡಿ ನ್ಯಾಶನಲ್‌ ಕಾಲೇಜು ಮೈದಾನದಲ್ಲಿ ಡಿ. 23, 24ರಂದು ನೆರವೇರಲಿರುವ ಐತಿಹಾಸಿಕ ಬೃಹತ್‌ ಕೋಟಿ ಗೀತಾ ಲೇಖನ ಯಜ್ಞ “ಗೀತೋತ್ಸವ’ ಕಾರ್ಯಕ್ರಮಕ್ಕೆ ಸೋಮವಾರ ಭೂಮಿಪೂಜೆ ನೆರವೇರಿತು.

Advertisement

ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅವರ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಹಸ್ರಾರು ಕೃಷ್ಣ ಭಕ್ತರಿಂದ ಸಮಗ್ರ ಭಗವದ್ಗೀತೆ ಹಾಗೂ ವಿಷ್ಣಸಹಸ್ರನಾಮ ಪಾರಾಯಣ, ನಾಡಿನ ಪ್ರಸಿದ್ಧ ಚಿಂತಕರು, ಉಪನ್ಯಾಸಕರಿಂದ ದೀತಾ-ಚಿಂತನ, ಭಗವದ್ಗೀತಾ ಕಲಾ ಪ್ರಾಕಾರಗಳ ಪ್ರಸ್ತುತಿ, ಶಾಲೆಯ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಸಂಬಂಧಿತ ಸ್ಪರ್ಧೆ, ಭಗವದ್ಗೀತೆಗೆ ಸಂಬಂಧಪಟ್ಟ ವಿವಿಧ ಚಿಂತನೆಗಳ ಸಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ ಮತ್ತು ಮಳಿಗೆಗಳು ಇರಲಿವೆ.

Advertisement

Udayavani is now on Telegram. Click here to join our channel and stay updated with the latest news.

Next