Advertisement

Bengaluru: ಬೈಕ್‌ ಕಳ್ಳನ ಬಂಧನ: 12 ದ್ವಿಚಕ್ರ ವಾಹನ ಜಪ್ತಿ

12:20 PM Aug 30, 2024 | Team Udayavani |

ಬೆಂಗಳೂರು: ನಗರದಲ್ಲಿ ರಸ್ತೆ ಬದಿ ಹಾಗೂ ಮನೆಗಳ ಎದುರು ರಾತ್ರಿ ವೇಳೆ ನಿಲು ಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಯನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಸೋರಹುಣಸೆಯ ಕಿರಣ್‌ (20) ಬಂಧಿತ ಆರೋಪಿ. ಈತನಿಂದ 9 ಲಕ್ಷ ರೂ. ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ರಾಮಾಲೇಔಟ್‌ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನ ಕಳ್ಳತನ ಸಂಬಂಧ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ವರ್ತೂರಿನ ಮತ್ಸಂದ್ರ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಕೊಳ್ಳೇಗಾಲದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವರ್ತೂರಿನ ಸೋರಹುಣಸೆಯ ನೀಲಗಿರಿ ತೋಪಿನಲ್ಲಿ ನಿಲುಗಡೆ ಮಾಡಿದ್ದ. ಅಲ್ಲಿಂದ ಎಲ್ಲ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಬಂಧನದಿಂದ ಬೆಂಗಳೂರು ಸೇರಿ ರಾಜ್ಯದ ಕೆಲ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ 7 ಪ್ರಕರಣಗಳು ಪñ ಯಾಗಿವೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next