Advertisement

Bengaluru: ಉದ್ಯಮಿ ಅಪಹರಿಸಿ ಸುಲಿಗೆ:ಜಿಎಸ್‌ಟಿ ಅಧಿಕಾರಿಗಳಿಗೆ ಸಿಸಿಬಿ ಪೊಲೀಸರಿಂದ ಗ್ರಿಲ್‌

11:47 AM Sep 13, 2024 | Team Udayavani |

ಬೆಂಗಳೂರು: ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ 1.5 ಕೋಟಿ ರೂ. ಸುಲಿಗೆ ನಡೆಸಿದ್ದ ಆರೋಪದಡಿ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಲಾಖೆ ಪ್ರಾದೇಶಿಕ ಕಚೇರಿಯ ಅಧೀಕ್ಷಕ ಸೇರಿದಂತೆ ನಾಲ್ವರು ಅಧಿಕಾರಿಗಳ ವಿಚಾರಣೆ ನಡೆಸಲಾಗುತ್ತಿದ್ದು, ಈ ಹಿಂದೆಯೂ ಕೃತ್ಯ ಎಸಗಿದ್ದಾರೆಯೇ ಎಂಬುದರ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ.

Advertisement

ಆರೋಪಿಗಳ ಮೊಬೈಲ್‌, ಲ್ಯಾಪ್‌ ಟಾಪ್‌ಗ್ಳನ್ನು ಸೈಬರ್‌ ತಜ್ಞರು ಪರಿಶೀಲಿಸಲಿದ್ದಾರೆ. ಇನ್ನು ಈ ಹಿಂದೆ ಆರೋಪಿಗಳು ಇದೇ ಮಾದರಿಯಲ್ಲಿ ಬೇರೆ ಕಡೆ ಸುಲಿಗೆ ಮಾಡಿದ್ದಾರೆಯೇ ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ದು ಪೊಲೀಸರು, ಸ್ಥಳ ಮಹಜರು ನಡೆಸಿದ್ದಾರೆ.

ಜೀವನ್‌ ಬಿಮಾನಗರದ ಜಿ.ಎಂ. ಪಾಳ್ಯದ ಉದ್ಯಮಿ ಕೇಶವ್‌ ತಕ್‌ ಅವರು ನೀಡಿದ ದೂರು ಆಧರಿಸಿ ಜಿಎಸ್‌ಟಿ ಗುಪ್ತಚರ ವಿಭಾಗದ ಮಹಾ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯ ದಕ್ಷಿಣ ವಲಯದ ಅಧೀಕ್ಷಕ ಅಭಿಷೇಕ್‌, ಹಿರಿಯ ಗುಪ್ತಚರ ಅಧಿಕಾರಿ ಮನೋಜ್‌ ಸೈನಿ, ನಾಗೇಶ್‌ ಬಾಬು ಹಾಗೂ ಗುಪ್ತಚರ ಅಧಿಕಾರಿ ಸೋನಲಿ ಸಹಾಯ್‌ ಅವರನ್ನು ಬಂಧಿಸಿ ಸಿಸಿಬಿ 10 ದಿನ ವಶಕ್ಕೆ ಪಡೆದುಕೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next