Advertisement

Bengaluru ಭಾರಿ ಮಳೆಗೆ ನಗರ ಕಂಗಾಲು ; ನೀರಿನಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

04:43 PM May 21, 2023 | Team Udayavani |

ಬೆಂಗಳೂರು : ನಗರದ ವಿವಿಧೆಡೆ ಮತ್ತು ಹೊರವಲಯದಲ್ಲಿ ಭಾನುವಾರ ಮಧ್ಯಾಹ್ನ ಭಾರಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ನಾಲ್ವರನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದಾರೆ. ಓರ್ವ ಯುವತಿ ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

Advertisement

ನೀರು ತುಂಬಿದ್ದ ವೇಳೆ ಏಕಾಏಕಿ ಕಾರು ಮುಳುಗಡೆಯಾಗಿದೆ. ಅಸ್ವಸ್ಥಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ನದಿಯಂತಾಗಿದ್ದು, ವಾಹನ ಸವಾರರು, ಬೀದಿ ವ್ಯಾಪಾರಿಗಳು ಪರದಾಡುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next