Advertisement

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

11:18 AM Jun 30, 2024 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿ ಇಬ್ಬರು ಸ್ನೇಹಿತರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಉತ್ತರ ಪ್ರದೇಶ ಮೂಲದ ವಿಮಲ್‌ ಯಾದವ್‌ (26) ಕೊಲೆ ಯಾದವ. ಕೃತ್ಯ ಎಸಗಿದ ಅಭಿಷೇಕ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ತಲಘಟ್ಟ ಪುರದ ಅಂಜನಾ ಪುರ ಲೇಔಟ್‌ನಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ.

ಉತ್ತರ ಪ್ರದೇಶ ಮೂಲದ ಇಬ್ಬರು 2 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನಿರ್ಮಾಣ ಹಂತದ ಕಟ್ಟಡಗಳಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಅಂಜನಾಪುರ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದು, ಇದೇ ಕಟ್ಟಡದ 2ನೇ ಮಹಡಿಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಜಗಳ ವಿಕೋಪಕ್ಕೆ ಹೋಗಿದ್ದು, ಕುಡಿದ ಆಮಲಿನಲ್ಲಿದ್ದ ಅಭಿಷೇಕ್‌, ವಿಮಲ್‌ ಯಾದವ್‌ ನನ್ನು ಕಟ್ಟಡದಿಂದ ಕೆಳಗೆ ತಳ್ಳಿದ್ದಾನೆ. ಕೆಳಗೆ ಬಿದ್ದ ವಿಮಲ್‌ ರಕ್ರಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next