Advertisement

Crime: ಹೆಂಡತಿಯನ್ನು ಮಾಂಸ ಕತ್ತರಿಸುವ  ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ

11:36 AM Oct 20, 2024 | Team Udayavani |

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತ್ನಿಯನ್ನು ಮಾಂಸ ಕತ್ತರಿಸುವ ಮಾರಕಾಸ್ತ್ರಗಳಿಂದ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಸಿಂಗೇನಹಳ್ಳಿ ನಿವಾಸಿ ಶ್ರೀನಿವಾಸ್‌(50) ಬಂಧಿತ. ಆರೋಪಿ ಪತ್ನಿ ಸುಧಾ ಅವರನ್ನು ಹತ್ಯೆಗೈದಿದ್ದ ಎಂದು ಪೊಲೀಸರು ಹೇಳಿದರು.

ಶ್ರೀನಿವಾಸ್‌ ಕೋಳಿ ಮಾಂಸದ ವ್ಯಾಪಾರ ನಡೆಸುತ್ತಿದ್ದ. ಪ್ರತಿದಿನ ಮದ್ಯ ಸೇವಿಸಿ ಬಂದು ಸಣ್ಣ-ಪುಟ್ಟ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆಸುತ್ತಿದ್ದರು. ಅದರಿಂದ ಬೇಸತ್ತು ಪತ್ನಿ ಹೊಸಕೋಟೆ ಯಲ್ಲಿ ಇರುವ ತವರುಮನೆಗೆ ಹೋಗಿದ್ದರು. ನಂತರ, ಸಂಬಂಧಿಕರ ಸಮ್ಮುಖದಲ್ಲಿ ರಾಜಿ ಸಂಧಾನ ನಡೆದು ಸುಧಾ ಪತಿಯ ಮನೆಗೆ ಬಂದಿದ್ದರು. ಶುಕ್ರವಾರ ರಾತ್ರಿ ಮತ್ತೆ ಇಬ್ಬರು ಮಧ್ಯೆ ಗಲಾಟೆ ನಡೆದಿದೆ. ಅದಾದ ಮೇಲೆ ತಡರಾತ್ರಿ ಕೋಳಿ ಕತ್ತರಿಸುವ ಮಚ್ಚಿನಿಂದ ಸುಧಾ ಅವರ ತಲೆ, ಕೈಗೆ ಹೊಡೆದು ಕೊಲೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next