Advertisement

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

10:47 AM May 04, 2024 | Team Udayavani |

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್‌ವೊಬ್ಬ ಆಟೋ ಚಾಲಕನನ್ನು ಹತ್ಯೆಗೈದಿರುವ ಘಟನೆ ಸಂಜನಯಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(41) ಕೊಲೆಯಾದ ಆಟೋ ಚಾಲಕ. ಗುರುವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ನಾಗಶೆಟ್ಟಿಹಳ್ಳಿ ಬಸ್‌ ನಿಲ್ದಾಣದ ಬಳಿ ಘಟನೆ ನಡೆದಿದೆ.

ನಾಗಶೆಟ್ಟಿಹಳ್ಳಿ ಬಸ್‌ ನಿಲ್ದಾಣದ ಬಳಿ ಮೂರ್ತಿ ಹಾಗೂ ಸಚಿನ್‌ ಎಂಬಾತ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದು, ಅದು ವಿಕೋಪಕ್ಕೆ ಹೋದಾಗ, ಮೂರ್ತಿ, ಸಚಿನ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಅದರಿಂದ ಕೋಪಗೊಂಡ ಸಚಿನ್‌, ರೌಡಿಶೀಟರ್‌ ಶರಣಪ್ಪನಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಮತ್ತೂಂದೆಡೆ ಶರಣಪ್ಪ ಮತ್ತು ಮೂರ್ತಿಗೆ ಈ ಹಿಂದೆ ಯಾವುದೋ ವಿಚಾರಕ್ಕೆ ಗಲಾಟೆಯಾಗಿದ್ದು, ಪರಸ್ಪರ ದ್ವೇಷ ಸಾಧಿಸುತ್ತಿದ್ದರು. ಸ್ಥಳಕ್ಕೆ ಬಂದ ಶರಣಪ್ಪ, ಮೂರ್ತಿಯನ್ನು ನೋಡುತ್ತಿದ್ದಂತೆ ಏಕಾಏಕಿ ಮಾರಕಾಸ್ತ್ರ ತೆಗೆದು ಮೂರ್ತಿಯ ಎದೆ, ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ. ಬಳಿಕ ಸಚಿನ್‌ ಜತೆ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದ ಮೂರ್ತಿಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಿಸದೇ ಮೂರ್ತಿ ಮೃತಪಟ್ಟಿದ್ದಾರೆ.

ಸದ್ಯ ಸಚಿನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ರೌಡಿಶೀಟರ್‌ ಶರಣಪ್ಪನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next