Advertisement

Bengaluru: ತನ್ನ ಮಗುವನ್ನೇ ಕತ್ತು ಹಿಸುಕಿ ಕೊಂದ ಸಾಫ್ಟ್ವೇರ್‌ ಉದ್ಯೋಗಿ ತಾಯಿ ಸೆರೆ

02:51 PM Jun 14, 2024 | Team Udayavani |

ಬೆಂಗಳೂರು: ಟೆಕಿ ತಾಯಿಯೇ ತನ್ನ 3 ವರ್ಷ 10 ತಿಂಗಳ ಬುದ್ಧಿಮಾಂದ್ಯ ಹೆಣ್ಣು ಮಗುವಿನ ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಚಿಕ್ಕಲ್ಲಸಂದ್ರದ ಮಂಜುನಾಥನಗರದ ಸಿರಿ ಅಪಾರ್ಟ್‌ಮೆಂಟ್‌ನ ನಿವಾಸಿ ಪ್ರೀತಿಕಾ (3 ವರ್ಷ 10 ತಿಂಗಳು) ಕೊಲೆಯಾದ ಮಗು. ಈಕೆಯ ತಾಯಿ ರಮ್ಯಾ(35) ಬಂಧಿತ ಆರೋಪಿ.

ಆರೋಪಿ ರಮ್ಯಾ ಹಾಗೂ ವೆಂಕಟೇಶ್‌ ಕೃಷ್ಣನ್‌ ಕಳೆದ 10 ವರ್ಷದ ಹಿಂದೆ ವಿವಾಹವಾಗಿದ್ದು, ದಂಪತಿಗೆ 3 ವರ್ಷ 10 ತಿಂಗಳ ಅವಳಿ ಹೆಣ್ಣು ಮಕ್ಕಳಿದ್ದರು. ವೃತ್ತಿಯಲ್ಲಿ ದಂಪತಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದ್ದಾರೆ.

ವೆಂಕಟೇಶ್‌ ನಾರ್ವೆಯಲ್ಲಿ ಉದ್ಯೋಗ ದಲ್ಲಿದ್ದರೆ, ರಮ್ಯಾ ಕೆಲ ವರ್ಷ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ಮಕ್ಕಳ ಆರೈಕೆಗಾಗಿ ಕೆಲಸ ತೊರೆದಿದ್ದರು. ಚಿಕ್ಕಲ್ಲಸಂದ್ರದ ಮಂಜುನಾಥನಗರದ ಅಪಾರ್ಟ್‌ಮೆಂಟ್‌ ನಲ್ಲಿ ಸ್ವಂತ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.

ಅವಳಿ ಮಕ್ಕಳ ಪೈಕಿ ಪ್ರೀತಿಕಾ ಬುದ್ಧಿಮಾಂದ್ಯೆಯಾಗಿದ್ದು, 3 ವರ್ಷ 10 ತಿಂಗಳಾದರೂ ಪ್ರೀತಿಕಾಗೆ ಮಾತು ಬರುತ್ತಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ರಮ್ಯಾ ಗುರುವಾರ ಮಧ್ಯಾಹ್ನ 12.30ಕ್ಕೆ ಮಗಳು ಪ್ರೀತಿಕಾಳ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ನಂತರ ತನ್ನ ತಪ್ಪಿನ ಅರಿವಾಗಿ ಪ್ರಜ್ಞಾಹೀನ ಸ್ಥಿತಿ ಯಲ್ಲಿದ್ದ ಪ್ರೀತಿಕಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

Advertisement

ಮಗು ಪ್ರೀತಿಕಾಳನ್ನು ಪರೀ ಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರು ವು ದನ್ನು ದೃಢಪಡಿಸಿದ್ದರು. ಬಳಿಕ ರಮ್ಯಾ ವಾಜರಹಳ್ಳಿಯಲ್ಲಿದ್ದ ತನ್ನ ಮೈದುನಾಗೆ ಕರೆ ಮಾಡಿ ಮಗು ಪ್ರೀತಿಕಾಳನ್ನು ಕೊಲೆ ಮಾಡಿರುವ ವಿಚಾರ ಹೇಳಿದ್ದಳು. ಕೂಡಲೇ ಮೈದುನಾ ಆಸ್ಪತ್ರೆಗೆ ಬಂದು ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಗೆ ಅತ್ತಿಗೆ ರಮ್ಯಾ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿ ಸಿಕೊಂಡ ಪೊಲೀಸರು ರಮ್ಯಾ ಅವರನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next