Advertisement

Bengaluru hit-and-run;100 ಮೀಟರ್ ಎಳೆದೊಯ್ದ ಕಾರು: ಡೆಲಿವರಿ ಬಾಯ್ ಮೃತ್ಯು

05:02 PM Jun 19, 2023 | Team Udayavani |

ಬೆಂಗಳೂರು: ರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ನಡೆದ ದಾರುಣ ಘಟನೆಯೊಂದರಲ್ಲಿ ಕಾರೊಂದು ಢಿಕ್ಕಿ ಹೊಡೆದು ಡೆಲಿವರಿ ಬಾಯ್ ಓರ್ವನನ್ನ ಸುಮಾರು 100 ಮೀಟರ್ ದೂರ ಎಳೆದುಕೊಂಡು ಹೋಗಿದ್ದು, ಪ್ರಸನ್ನ ಕುಮಾರ್ ಎಂಬ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾರೆ.

Advertisement

ಹೆಚ್.ಡಿ. ಮೈಸೂರು ಜಿಲ್ಲೆಯ ಕೋಟೆ ಮೂಲದ ಪ್ರಸನ್ನ ಕುಮಾರ್ ಜನಪ್ರಿಯ ಆಹಾರ ವಿತರಣಾ ಸಂಸ್ಥೆಗೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು.

ಘಟನೆ ಬಳಿಕ ಕಾರಿನ ಚಾಲಕ ವಿನಾಯಕ ಎಂಬಾತನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ವಿನಾಯಕ್ ಕಾರು ಶೋ ರೂಂನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೂವರು ಹುಡುಗಿಯರು ಸೇರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿ ಮದ್ಯದ ಅಮಲಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸ್ನೇಹಿತರೊಬ್ಬರನ್ನು ರಾಜರಾಜೇಶ್ವರಿ ನಗರದಲ್ಲಿರುವ ಮನೆಗೆ ಬಿಡಲು ಹೋಗುತ್ತಿದ್ದರು.ಈ ವೇಳೆ ಕಾರು ಹಿಂಬದಿಯಿಂದ ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಅಪಘಾತದ ನಂತರ ಆರೋಪಿಗಳು ವಾಹನವನ್ನು ನಿಲ್ಲಿಸದೆ ಡೆಲಿವರಿ ಬಾಯ್ ನನ್ನ 100 ಮೀಟರ್‌ವರೆಗೆ ಎಳೆದೊಯ್ದಿದ್ದಾರೆ.ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಅಪಘಾತವನ್ನು ಕಂಡ ದಾರಿಹೋಕರು ಒಂದು ಕಿಲೋಮೀಟರ್ ದೂರ ಕಾರನ್ನು ಹಿಂಬಾಲಿಸಿ ಚಾಲಕನನ್ನು ಹಿಡಿದಿದ್ದಾರೆ. ಮೂವರು ಹುಡುಗಿಯರು ಮತ್ತು ಒಬ್ಬ ಹುಡುಗ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಆಕ್ರೋಶಗೊಂಡ ಗುಂಪು ಕಾರಿನ ಗಾಜುಗಳನ್ನು ಒಡೆದು ಆರೋಪಿಯನ್ನು ಬ್ಯಾಟರಾಯನಪುರ ಸಂಚಾರ ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next