Advertisement

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯ ಕೊಚ್ಚಿ ಭೀಕರ ಕೊಲೆ

01:25 PM Nov 13, 2021 | Team Udayavani |

ಬೆಂಗಳೂರು: ನಗರದ ನಾಗವಾರ ರಸ್ತೆಯಲ್ಲಿ ಶನಿವಾರ ಹಾಡ ಹಗಲೇ ವ್ಯಕ್ತಿಯೊಬ್ಬರನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದೆ.

Advertisement

ಶ್ರೀಧರ್ ಎಂಬ ವ್ಯಕ್ತಿ ಹತ್ಯೆಗೀಡಾಗಿದ್ದು, ನಾಲ್ಕೈದು ಜನರು ದಾಳಿ ನಡೆಸಿ ಲಾಂಗ್ ಮತ್ತು ಮಚ್ಚುಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next