Advertisement

ಮಧ್ಯಪ್ರದೇಶದ ಮಹಿಳೆ ಜತೆಗೆ ಬೆಂಗಳೂರಿನ ವ್ಯಕ್ತಿ ಜೆಹಾದ್‌!?

11:46 PM Jun 23, 2023 | Team Udayavani |

ಭೋಪಾಲ್‌: ಮಧ್ಯಪ್ರದೇಶದ ಮಹಿಳೆಯೊಬ್ಬರಿಗೆ ಕರ್ನಾಟಕದ ಬೆಂಗಳೂರಿನಲ್ಲಿರುವ ವ್ಯಕ್ತಿಯೊಬ್ಬ ತನ್ನ ಧರ್ಮದ ಗುರುತು ಮುಚ್ಚಿಟ್ಟು ಮದುವೆಯಾಗುವ ಭರವಸೆ ನೀಡಿ, ಲೈಂಗಿಕವಾಗಿ ದುರುಪ ಯೋಗ ಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್‌ ಸರಕಾರವನ್ನು ಮಧ್ಯಪ್ರದೇಶ ಸರಕಾರ ತರಾಟೆ ತೆಗೆದುಕೊಂಡಿದೆ. ದಮೋಹ್‌ ಪ್ರದೇಶದ ಮಹಿಳೆಯೊಬ್ಬರು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಓಮರ್‌ ಫಾರುಖ್‌ ಎಂಬಾತನ ಜತೆಗೆ ಸ್ನೇಹ ಬೆಳೆಸಿದ್ದಾರೆ. ಆತ ತನ್ನ ಹೆಸರನ್ನು ರಾಜೀವ್‌ ಎಂಬುದಾಗಿ ಹೇಳಿಕೊಂಡಿದ್ದ. ಮದುವೆಯಾಗುವ ಆಶ್ವಾಸನೆ ನೀಡಿ, ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ.

Advertisement

ಬಳಿಕ ಆತ ಮುಸ್ಲಿಂ ಎಂದು ತಿಳಿದುಬಂದಿದೆ. ಆದಾಗ್ಯೂ, ಮದುವೆ ಯಾಗುವಂತೆ ಕೇಳಿದರೆ ಖಾಸಗಿ ಚಿತ್ರ, ವೀಡಿಯೋಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಹೀಗೆಂದು ಆರೋಪಿಸಿ ಮಹಿಳೆ ದಮೋಹ್‌ನಲ್ಲಿ ಕೇಸು ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಪೊಲೀಸರು ಕರ್ನಾಟಕಕ್ಕೆ ಬಂದಿದ್ದಾರೆ.

ಲವ್‌ ಜೆಹಾದ್‌ ಮದ ಇಳಿಸುತ್ತೇವೆ: ಘಟನೆ ಬಗ್ಗೆ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ ಮಿಶ್ರಾ ಕಿಡಿಕಾರಿದ್ದು, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದಲ್ಲಿ ನಾನೂ ಮಹಿಳೆ ನಮಗೆ ಹೋರಾಡುವುದು ಗೊತ್ತಿದೆ ಎಂದಿದ್ದರು. ಈಗ ನಮ್ಮ ರಾಜ್ಯದ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ. ಆರೋಪಿಯನ್ನು ಅವರದ್ದೇ ಸರಕಾರ ಹುಡುಕಿಕೊಡಲಿ. ಅವನ ಲವ್‌ ಜೆಹಾದ್‌ ಮದವನ್ನು ನಾವು ಇಳಿಸುತ್ತೇವೆ ಎಂದು ಕಿಡಿ ಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next