Advertisement
ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರದ ಪರವಾಗಿ ರಾಮಲಿಂಗಾ ರೆಡ್ಡಿ ಅವರು ಭರವಸೆ ನೀಡಿದ ಹಿನ್ನಲೆಯಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಮತ್ತು ಬಂದ್ ಕರೆಯನ್ನು ಸಂಜೆ ಹಿಂತೆಗೆದುಕೊಳ್ಳಲಾಗಿದೆ. ಸೋಮವಾರ ಮಧ್ಯರಾತ್ರಿಯವರೆಗೂ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬೆಂಗಳೂರು ಬಂದ್ ಘೋಷಿಸಿ, ವಾಹನಗಳನ್ನು ರಸ್ತೆಗಿಳಿಸದಿರಲು ನಿರ್ಧರಿಸಿತ್ತು. ಸಚಿವರ ಮಾತುಕತೆಯ ಬಳಿಕ ಪ್ರತಿಭಟನೆಯನ್ನ ಹಿಂಪಡೆದುಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.
Related Articles
Advertisement
ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಪ್ರಯಾಣಿಕನನ್ನು ಕೂರಿಸಿಕೊಂಡು ಸಾಗುತ್ತಿದ್ದ ರ್ಯಾಪಿಡೋ ಬೈಕ್ ಸವಾರನನ್ನು ತಡೆದು ಪ್ರತಿಭಟನಾಕಾರರು ಥಳಿಸಿ ಆಕ್ರೋಶ ಹೊರಹಾಕಿದ್ದಾರೆ.
ಮುಷ್ಕರದ ಕರೆಯನ್ನು ಧಿಕ್ಕರಿಸಿದ ಆಟೋ, ಟ್ಯಾಕ್ಸಿ ಚಾಲಕರನ್ನು ಪ್ರತಿಭಟನಾಕಾರರು ತಡೆದು ಹಲ್ಲೆ ನಡೆಸಿದ ನಿದರ್ಶನಗಳು ಬೆಂಗಳೂರಿನಲ್ಲಿ ವರದಿಯಾಗಿವೆ. ಕೆಲವೆಡೆ ವಾಹನಗಳಿಗೆ ಹಾನಿಯಾದ ಘಟನೆಗಳು, ಚಕ್ರದ ಗಾಳಿ ತೆಗೆದ ಘಟನೆಗಳು ನಡೆದಿವೆ.