Advertisement

Bengaluru: ಮುನಿರತ್ನ ಹನಿಟ್ರ್ಯಾಪ್‌ ಪ್ರಕರಣ: ಪ್ರಭಾವಿಗಳಿಗೆ ಶೀಘ್ರ ನೋಟಿಸ್‌?

12:34 AM Oct 14, 2024 | Team Udayavani |

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕೇಳಿ ಬಂದಿರುವ ಹನಿಟ್ರ್ಯಾಪ್‌, ಅತ್ಯಾಚಾರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಂತ್ರಸ್ತೆಯ ಹೇಳಿಕೆ ಮೇರೆಗೆ ಕೆಲವು ಪ್ರಭಾವಿಗಳಿಗೆ ಶೀಘ್ರದಲ್ಲೇ ನೋಟಿಸ್‌ ಕೊಟ್ಟು, ಬುಲಾವ್‌ ನೀಡುವ ಸಾಧ್ಯತೆಗಳಿವೆ.

Advertisement

ಸಂತ್ರಸ್ತೆಯು ಎಸ್‌ಐಟಿ ವಿಚಾರಣೆ ವೇಳೆ ಮುನಿರತ್ನಗೆ ಕೆಲವು ಪ್ರಭಾವಿಗಳು ಸಾಥ್‌ ನೀಡಿರುವ ಕುರಿತು ಮಾಹಿತಿ ನೀಡಿದ್ದಾಳೆ. ಮುನಿರತ್ನ ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್‌ನಲ್ಲಿ ಕೆಲ ಅಧಿಕಾರಿಗಳು, ಮಾಜಿ ಕಾರ್ಪೋರೇಟರ್‌ಗಳು ಹಾಗೂ ಸ್ಥಳೀಯ ರಾಜಕಾರಣಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಕೆಲವು ಪ್ರಭಾವಿಗಳನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ.

ಶೀಘ್ರದಲ್ಲೇ ಆ ಪ್ರಭಾವಿಗಳಿಗೆ ಎಸ್‌ಐಟಿ ನೋಟಿಸ್‌ ನೀಡಿ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸುವ ಸಾಧ್ಯತೆಗಳಿವೆ. ಮುನಿರತ್ನ ಮೊಬೈಲ್‌ಗಾಗಿ ಶೋಧ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ. ಮುನಿರತ್ನ ವಿರುದ್ಧ ದೂರು ನೀಡಿರುವ ಸಂತ್ರಸ್ತೆಯಿಂದ ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿ ಹಾಗೂ ದಾಖಲೆಗಳನ್ನು ಈಗಾಗಲೇ ಕಲೆ ಹಾಕಿದ್ದಾರೆ. ಮುನಿರತ್ನ ಅವರನ್ನೂ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದಾದ ಬಳಿಕ ಕೆಲವು ತಾಂತ್ರಿಕ ಸಾಕ್ಷ್ಯಗಳು ಎಸ್‌ಐಟಿ ಕೈ ಸೇರಿವೆ.

Advertisement

Udayavani is now on Telegram. Click here to join our channel and stay updated with the latest news.

Next