Advertisement

Bengaluru-Mysuru ಎಕ್ಸ್‌ಪ್ರೆಸ್‌ ವೇ: ಮೊದಲ ದಿನವೇ 1350 ಕೇಸ್‌ ದಾಖಲು

09:06 PM Jun 01, 2024 | Team Udayavani |

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಎಐ ಕ್ಯಾಮರಾಗಳು ಪೂರ್ಣ ಪ್ರಮಾಣದಲ್ಲಿ ಶನಿವಾರದಿಂದ ಕಾರ್ಯಾರಂಭ ಮಾಡಿದ್ದು, ಮೊದಲ ದಿನವೇ 1350 ಸಂಚಾರ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

Advertisement

ಎಕ್ಸ್‌ಪ್ರೆಸ್‌ ವೇನಲ್ಲಿ ಬೆಂಗಳೂರಿನ ಕೆಂಗೇರಿ ಸಮೀಪದ ನೈಸ್‌ ರಸ್ತೆ ಜಂಕ್ಷನ್‌ ಬಳಿಯಿಂದ ನಿಡಘಟ್ಟದ ವರೆಗೆ 5 ಕಡೆ, ನಿಡಘಟ್ಟದಿಂದ ಮೈಸೂರು ವರೆಗೆ 5 ಕಡೆ ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಈ ಎರಡೂ ಕಡೆಯ ಕ್ಯಾಮರಾಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಎರಡೂ ಜಿಲ್ಲೆಯ ಜಿಲ್ಲಾ ಪೊಲೀಸ್‌ ಕಂಟ್ರೋಲ್‌ ರೂಂನಲ್ಲಿ ಆಯಾ ಜಿಲ್ಲೆಗೆ ಸೇರಿದ ಸರ್ವರ್‌ ಸ್ಥಾಪಿಸಿ ಆಯಾ ಜಿಲ್ಲಾ ವ್ಯಾಪ್ತಿಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ಎರಡೂ ಜಿಲ್ಲೆ ಸೇರಿ 1350 ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next