Advertisement

ಬೆಂಗಳೂರಿನಲ್ಲಿ ನಟೋರಿಯಸ್ ರೌಡಿಯಿಂದ ಪೋಲೀಸರ ಮೇಲೆ ದಾಳಿ:ಕಾಲಿಗೆ ಗುಂಡು

11:05 AM Nov 17, 2021 | Team Udayavani |

ಬೆಂಗಳೂರು : ನಟೋರಿಯಸ್ ರೌಡಿಯೊಬ್ಬ ಪೋಲೀಸರ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.

Advertisement

20ಕ್ಕೂ ಹೆಚ್ಚು ಪ್ರಕರಣಗಳನ್ನು ಹೊತ್ತಿರುವ ಕರ್ಚೀಫ್ ಪಳನಿ ಎಂಬ ರೌಡಿ ವಿರುದ್ಧ ರಾತ್ರಿ 11 ಗಂಟೆಯ ವೇಳೆಗೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಮಶಾನದ ಬಳಿ ಪೊಲೀಸರು ಕಾರ್ಯಾಚರಣೆಗೆ ಇಳಿದಾಗ ಆತನನ್ನು ಶರಣಾಗಲು ಸೂಚಿಸಿ ಸಿಸಿಬಿ ಎಸಿಪಿ ಪರಮೇಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆ ತಿರುಗಿ ಬಿದ್ದ ಪಳನಿ ಇನ್ಸ್‌ಪೆಕ್ಟರ್ ಹರೀಶ್ ಕುಮಾರ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಅವರ ಎಡ ಮೊಣಕೈಗೆ ಗಾಯಗಳಾಗಿವೆ. ತಕ್ಷಣ ಎಸಿಪಿ ಪಳನಿಯ ಮೇಲೆ ಗುಂಡು ಹಾರಿಸಿದ್ದು, ಆತನ ಎಡಗಾಲಿಗೆ ಗುಂಡು ತಗುಲಿ ಕೆಳಗೆ ಬಿದ್ದಿದ್ದಾನೆ.

ಪಳನಿಯನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾದ ನಂತರ ಈತ ತಲೆಮರೆಸಿಕೊಂಡಿದ್ದ.

Advertisement

Udayavani is now on Telegram. Click here to join our channel and stay updated with the latest news.

Next