Advertisement

ಬೆಂಗಳೂರು: ಮಳೆಗೆ ಜನರ ಪರದಾಟ, ಸಂಚಾರ ಅಸ್ತವ್ಯಸ್ತ

12:09 AM Oct 15, 2022 | Team Udayavani |

ಬೆಂಗಳೂರು: ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ.

Advertisement

ರಾತ್ರಿ 7 ಗಂಟೆ ಬಳಿಕ ಸತತ ಒಂದು ಗಂಟೆಗಳ ಮಳೆಯಾಗಿದ್ದು, ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಾನಂದ ವೃತ್ತ, ಮಲ್ಲೇಶ್ವರ, ಎಂ.ಜಿ. ರಸ್ತೆ, ಡಬಲ್‌ ರೋಡ್‌, ಆನಂದ್‌ರಾವ್‌ ವೃತ್ತ, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್‌, ಚಾಮರಾಜಪೇಟೆ ಸಹಿತ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.

ಏಕಾಏಕಿ ಮಳೆ ಸುರಿದ ಕಾರಣ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಪರದಾಡಿದರು. ಜತೆಗೆ ಒಕಳಿಪುರ ಕೆಳಸೇತುವೆ, ಶಿವಾನಂದ ವೃತ್ತ, ಕಾವೇರಿ ಜಂಕ್ಷನ್‌ ಸಹಿತ ಹಲವು ರಸ್ತೆಗಳು, ಕೆಳಸೇತುವೆಗಳಲ್ಲಿ ನೀರು ನಿಂತು ತೊಂದರೆ ಉಂಟಾಯಿತು.ಹೆಬ್ಬಾಳ ಎನ್‌ಇಟಿ ಬಸ್‌ ನಿಲ್ದಾಣ, ಸಂಜಯನಗರ ಬಳಿ ಮರ ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next