Advertisement

ವಿಚಾರಣ ನೋಟಿಸ್‌ ಸ್ವೀಕರಿಸಲು ಬಿವೈವಿ, ಅಮಿತ್‌ ಮಾಳವೀಯ ನಿರಾಕರಣೆ

12:31 AM May 12, 2024 | Team Udayavani |

ಬೆಂಗಳೂರು: ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ “ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೀಡಿದ್ದ ನೋಟಿಸ್‌ ಅನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಅವರು ಖುದ್ದು ಸ್ವೀಕರಿಸಲು ನಿರಾಕರಿಸಿದ್ದಾರೆ.

Advertisement

ಇದೇ ಪ್ರಕರಣದಲ್ಲಿ ಆರೋಪಿ ಯಾಗಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಖುದ್ದು ಅವರ ನಿವಾಸಕ್ಕೆ ತೆರಳಿ ಶೀಘ್ರದಲ್ಲಿ ನೊಟೀಸ್‌ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೇ 6ರಂದು ನೋಟಿಸ್‌ ಜಾರಿಗೊಳಿಸಿರುವ ಹೈಗ್ರೌಂಡ್ಸ್‌ ಠಾಣೆ ಪೊಲೀಸರು, ನೋಟಿಸ್‌ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದ್ದರು. ಹೀಗಾಗಿ ಪಶ್ಚಿಮ ಬಂಗಾಲದ ಕೃಷ್ಣನಗರದಲ್ಲಿ ಅಮಿತ್‌ ಮಾಳವೀಯ ನಿವಾಸಕ್ಕೆ ಖುದ್ದು ತೆರಳಿ ನೊಟೀಸ್‌ ನೀಡಲು ಪೊಲೀಸರು ಮುಂದಾಗಿದ್ದರು. ಆದರೆ ಅಮಿತ್‌ ಮಾಳವೀಯ ನೊಟೀಸ್‌ ಸ್ವೀಕರಿಸಿಲ್ಲ. ಬದಲಾಗಿ ಇ-ಮೇಲ್ ಮೂಲಕ ನೋಟಿಸ್‌ ಸ್ವೀಕರಿಸಿದ್ದಾರೆ. ಇಂಥ ಪ್ರಕರಣಗಳಿಗೆ ನೇರವಾಗಿ ಬಂದು ನೋಟಿಸ್‌ ನೀಡುವ ಅಗತ್ಯವಿಲ್ಲ. ಈ ಬಗ್ಗೆ ನಮ್ಮ ವಕೀಲರು ನೋಡಿಕೊಳ್ಳಲಿದ್ದಾರೆ. ಇದೇ ರೀತಿ 40ಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ ಎಂದು ಅಮಿತ್‌ ಮಾಳವೀಯ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next