Advertisement

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

05:55 PM Aug 19, 2024 | Team Udayavani |

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವ ವೇಳೆಯೇ ಹೃದಯಾಘಾತದಿಂದ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟ ಘಟನೆ ನಗರದ ಪ್ರೆಸ್ ಕ್ಲಬ್​​ನಲ್ಲಿ ನಡೆದಿದೆ.

Advertisement

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಕುರುಬರ ಸಂಘದ ಅಧ್ಯಕ್ಷ ಸಿ.ಕೆ.ರವಿಚಂದ್ರನ್ ಅವರು ಕೆಲ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯಪಾಲರ ನಿರ್ಣಯದ ವಿರುದ್ಧ ಮಾತನಾಡುವಾಗ ಒಮ್ಮೆಲೇ  ಮೈ ನಡುಗಿದ್ದು, ಆ ಕ್ಷಣವೇ ಕುಳಿತಲ್ಲಿಂದ ಕುಸಿದು ಬಿದ್ದಿದ್ದಾರೆ.  ಕೂಡಲೇ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಾಧ್ಯಮಗಳ ಕ್ಯಾಮರಾ ಮುಂದೆಯೇ ಹೃದಯಾಘಾತ:
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಲೈವ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಎಲ್ಲ ಕ್ಯಾಮೆರಾಗಳ ಮುಂದೆ ಮೈಕ್ ಹಿಡಿದು ಮಾತನಾಡುವಾಗಲೇ  ಹೃದಯಾಘಾತ ಸಂಭವಿಸಿದೆ.

ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್  ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಜೊತೆ ಓಡನಾಟ ಹೊಂದಿದ್ದ ಪ್ರಸ್ತುತ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯೂ ಒಡನಾಟ ಇತ್ತು. ಇತ್ತೀಚೆಗಷ್ಟೇ  ಕಾಂಗ್ರೆಸ್ ಸೇರಿಕೊಂಡಿದ್ದ ರವಿಚಂದ್ರನ್, ಪ್ರಚಾರ ಸಮಿತಿ ಸದಸ್ಯರಾಗಿದ್ದರು. ಬೆಂಗಳೂರು ನಗರದ ಆರ್.ಆರ್. ನಗರದ ಚನ್ನಸಂದ್ರದಲ್ಲಿ ವಾಸವಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next