Advertisement

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

01:10 PM Oct 05, 2024 | Team Udayavani |

ಬೆಂಗಳೂರು: ಕೆಲ ತಿಂಗಳ ಹಿಂದೆ ನಗರದ ಹೊರವಲಯದಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಸುಲಿಗೆ ಹಾಗೂ ದೌರ್ಜನ್ಯ ಆರೋಪ ಕೇಳಿ ಬಂದಿದೆ.

Advertisement

ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ವಿಜಯ್‌ ಡೆನ್ನಿಸ್‌ ಎಂಬುವರು ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ರೇವ್‌ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ನಗರದ ಹೊರವಲಯದ ಫಾರ್ಮ್ ಹೌಸ್‌ ಮೇಲೆ ಮೇ 19 ರಂದು ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಕಾನೂನು ಪ್ರಕ್ರಿಯೆ ಮಾಡದೇ ಸುಲಿಗೆಗೆ ಮುಂದಾಗಿದ್ದಾರೆ.

ಪಾರ್ಟಿ ಯಲ್ಲಿ ಭಾಗಿಯಾದ್ದ ವ್ಯಕ್ತಿಯೊಬ್ಬರು ಮಾದಕ ಸೇವನೆ ಮಾಡಿರುವುದರ ಕುರಿತ ವೈದ್ಯಕೀಯ ಪರೀಕ್ಷೆ ವರದಿ ಪಾಸಿಟಿವ್‌ ಬಂದಿರುವುದಾಗಿ ಬೆದರಿಸಲಾಗಿದೆ. ಜತೆಗೆ ಅವರ ವಾಹನವನ್ನು ಬಿಡುಗಡೆ ಮಾಡಲು ಲಕ್ಷಾಂತರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ. ಪೊಲೀಸರು ತಮಗೆ ಅನುಕೂಲವಾಗುವಂತೆ ವೈದ್ಯಕೀಯ ಪರೀಕ್ಷೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next